ಮನರಂಜನೆ

ದುನಿಯಾ’ ವಿಜಯ್‍ ಮಗಳಿಗೆ ವಿನಯ್‍ ಹೀರೋ: ‘ಸಿಟಿ ಲೈಟ್ಸ್’ ಚಿತ್ರಕ್ಕೆ ಸೇರ್ಪಡೆ

‘ದುನಿಯಾ’ ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈಗ ಆ ಚಿತ್ರಕ್ಕೆ ವಿನಯ್‍ ರಾಜಕುಮಾರ್‍ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ.

‘ಸಿಟಿ ಲೈಟ್ಸ್ ಚಿತ್ರದ ಮೊದಲ ಪೋಸ್ಟರ್‍ ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ವಿಶೇಷವೆಂದರೆ, ‘ಸಿಟಿ ಲೈಟ್ಸ್’ ಚಿತ್ರವನ್ನು ‘ದುನಿಯಾ’ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಹಂತವಾಗಿ ನಾಯಕಿಯನ್ನು ಪರಿಚಯಿಸಲಾಗಿತ್ತು. ಇದೀಗ ನಾಯಕನನ್ನು ಪರಿಚಯಿಸುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಬಿಡುಗಡೆಯಾಗಿತ್ತು. ಚಿತ್ರ ಭಾರೀ ಪ್ರಚಾರದೊಂದಿಗೆ ಬಿಡುಗಡೆಯಾದರೂ, ಪ್ರೇಕ್ಷಕರ ನಿರೀಕ್ಷೆಗೆ ನಿಲುಕಲಿಲ್ಲ. ಈ ಚಿತ್ರದಲ್ಲಿ ಪ್ರಚಾರ ಮಾಡುವುದರ ಜೊತೆಗೆ, ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲೂ ಭಾಗಿಯಾಗಿದ್ದರು. ಇದೀಗ ವಿಜಯ್‍ ತಮ್ಮ ಮುಂದಿನ ಚಿತ್ರದಲ್ಲಿ ವಿನಯ್‍ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮೋನಿಷಾಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತಂತೆ. ಚಿತ್ರರಂಗಕ್ಕೆ ಬರಬೇಕು ಮತ್ತು ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಅಪ್ಪನಿಗೆ ಪೀಡಿಸುತ್ತಿದ್ದರಂತೆ. ಆಗೆಲ್ಲಾ ವಿಜಯ್, ‘ಮೊದಲು ಓದು, ಸಿನಿಮಾ ಬೇಡ’ ಎಂದು ಹೇಳುತ್ತಿದ್ದರಂತೆ. ಕೊನೆಗೆ ಅಪ್ಪನನ್ನು ಒಪ್ಪಿಸುವಲ್ಲಿ ಮೋನಿಷಾ ಯಶಸ್ವಿಯಾಗಿದ್ದಾರೆ. ಬ್ಯಾಚುಲರ್‍ ಆಫ್‍ ಥಿಯೇಟರ್‍ ಮುಗಿಸಿರುವ ಮೋನಿಷಾಗೆ ರಂಗಭೂಮಿಯಲ್ಲಿ ಸಿಕ್ಕ ಅನುಭವ ಇನ್ನಷ್ಟು ವಿಶ್ವಾಸ ಹೆಚ್ಚಿಸಿತಂತೆ. ಅದೇ ವಿಶ್ವಾಸ ವಿಜಯ್‍ ಅವರನ್ನೂ ಒಪ್ಪಿಸಲಿಕ್ಕೆ ಸಾಧ್ಯವಾಯಿತು ಎಂದು ಮೋನಿಷಾ ನಂಬಿಕೆ. ಆ ನಂತರ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಪದವಿ ಪಡೆಯುವುದಕ್ಕೆ ಅಮೇರಿಕಾಗೆ ಹಾರಿದ್ದಾರೆ. ಅಲ್ಲಿಂದ ಬಂದು ಇದೀಗ ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಪೋಸ್ಟರ್ ಮಾತ್ರ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ. ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ‘ರಾಚಯ್ಯ’ ಚಿತ್ರದ ಮೂರನೇ ಹಂತದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದ್ದು, ಬಹುಶಃ ಈ ವರ್ಷಾಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

 

 

ಆಂದೋಲನ ಡೆಸ್ಕ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

3 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

4 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

4 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

4 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

4 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

4 hours ago