ಮನರಂಜನೆ

ದುನಿಯಾ’ ವಿಜಯ್‍ ಮಗಳಿಗೆ ವಿನಯ್‍ ಹೀರೋ: ‘ಸಿಟಿ ಲೈಟ್ಸ್’ ಚಿತ್ರಕ್ಕೆ ಸೇರ್ಪಡೆ

‘ದುನಿಯಾ’ ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈಗ ಆ ಚಿತ್ರಕ್ಕೆ ವಿನಯ್‍ ರಾಜಕುಮಾರ್‍ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ.

‘ಸಿಟಿ ಲೈಟ್ಸ್ ಚಿತ್ರದ ಮೊದಲ ಪೋಸ್ಟರ್‍ ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ವಿಶೇಷವೆಂದರೆ, ‘ಸಿಟಿ ಲೈಟ್ಸ್’ ಚಿತ್ರವನ್ನು ‘ದುನಿಯಾ’ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಹಂತವಾಗಿ ನಾಯಕಿಯನ್ನು ಪರಿಚಯಿಸಲಾಗಿತ್ತು. ಇದೀಗ ನಾಯಕನನ್ನು ಪರಿಚಯಿಸುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಬಿಡುಗಡೆಯಾಗಿತ್ತು. ಚಿತ್ರ ಭಾರೀ ಪ್ರಚಾರದೊಂದಿಗೆ ಬಿಡುಗಡೆಯಾದರೂ, ಪ್ರೇಕ್ಷಕರ ನಿರೀಕ್ಷೆಗೆ ನಿಲುಕಲಿಲ್ಲ. ಈ ಚಿತ್ರದಲ್ಲಿ ಪ್ರಚಾರ ಮಾಡುವುದರ ಜೊತೆಗೆ, ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲೂ ಭಾಗಿಯಾಗಿದ್ದರು. ಇದೀಗ ವಿಜಯ್‍ ತಮ್ಮ ಮುಂದಿನ ಚಿತ್ರದಲ್ಲಿ ವಿನಯ್‍ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮೋನಿಷಾಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತಂತೆ. ಚಿತ್ರರಂಗಕ್ಕೆ ಬರಬೇಕು ಮತ್ತು ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಅಪ್ಪನಿಗೆ ಪೀಡಿಸುತ್ತಿದ್ದರಂತೆ. ಆಗೆಲ್ಲಾ ವಿಜಯ್, ‘ಮೊದಲು ಓದು, ಸಿನಿಮಾ ಬೇಡ’ ಎಂದು ಹೇಳುತ್ತಿದ್ದರಂತೆ. ಕೊನೆಗೆ ಅಪ್ಪನನ್ನು ಒಪ್ಪಿಸುವಲ್ಲಿ ಮೋನಿಷಾ ಯಶಸ್ವಿಯಾಗಿದ್ದಾರೆ. ಬ್ಯಾಚುಲರ್‍ ಆಫ್‍ ಥಿಯೇಟರ್‍ ಮುಗಿಸಿರುವ ಮೋನಿಷಾಗೆ ರಂಗಭೂಮಿಯಲ್ಲಿ ಸಿಕ್ಕ ಅನುಭವ ಇನ್ನಷ್ಟು ವಿಶ್ವಾಸ ಹೆಚ್ಚಿಸಿತಂತೆ. ಅದೇ ವಿಶ್ವಾಸ ವಿಜಯ್‍ ಅವರನ್ನೂ ಒಪ್ಪಿಸಲಿಕ್ಕೆ ಸಾಧ್ಯವಾಯಿತು ಎಂದು ಮೋನಿಷಾ ನಂಬಿಕೆ. ಆ ನಂತರ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಪದವಿ ಪಡೆಯುವುದಕ್ಕೆ ಅಮೇರಿಕಾಗೆ ಹಾರಿದ್ದಾರೆ. ಅಲ್ಲಿಂದ ಬಂದು ಇದೀಗ ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಪೋಸ್ಟರ್ ಮಾತ್ರ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ. ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ‘ರಾಚಯ್ಯ’ ಚಿತ್ರದ ಮೂರನೇ ಹಂತದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದ್ದು, ಬಹುಶಃ ಈ ವರ್ಷಾಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

 

 

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

2 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

2 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

2 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

2 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

13 hours ago