ಮನರಂಜನೆ

ದುನಿಯಾ’ ವಿಜಯ್‍ ಮಗಳಿಗೆ ವಿನಯ್‍ ಹೀರೋ: ‘ಸಿಟಿ ಲೈಟ್ಸ್’ ಚಿತ್ರಕ್ಕೆ ಸೇರ್ಪಡೆ

‘ದುನಿಯಾ’ ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈಗ ಆ ಚಿತ್ರಕ್ಕೆ ವಿನಯ್‍ ರಾಜಕುಮಾರ್‍ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ.

‘ಸಿಟಿ ಲೈಟ್ಸ್ ಚಿತ್ರದ ಮೊದಲ ಪೋಸ್ಟರ್‍ ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ವಿಶೇಷವೆಂದರೆ, ‘ಸಿಟಿ ಲೈಟ್ಸ್’ ಚಿತ್ರವನ್ನು ‘ದುನಿಯಾ’ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಹಂತವಾಗಿ ನಾಯಕಿಯನ್ನು ಪರಿಚಯಿಸಲಾಗಿತ್ತು. ಇದೀಗ ನಾಯಕನನ್ನು ಪರಿಚಯಿಸುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಬಿಡುಗಡೆಯಾಗಿತ್ತು. ಚಿತ್ರ ಭಾರೀ ಪ್ರಚಾರದೊಂದಿಗೆ ಬಿಡುಗಡೆಯಾದರೂ, ಪ್ರೇಕ್ಷಕರ ನಿರೀಕ್ಷೆಗೆ ನಿಲುಕಲಿಲ್ಲ. ಈ ಚಿತ್ರದಲ್ಲಿ ಪ್ರಚಾರ ಮಾಡುವುದರ ಜೊತೆಗೆ, ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲೂ ಭಾಗಿಯಾಗಿದ್ದರು. ಇದೀಗ ವಿಜಯ್‍ ತಮ್ಮ ಮುಂದಿನ ಚಿತ್ರದಲ್ಲಿ ವಿನಯ್‍ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮೋನಿಷಾಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತಂತೆ. ಚಿತ್ರರಂಗಕ್ಕೆ ಬರಬೇಕು ಮತ್ತು ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಅಪ್ಪನಿಗೆ ಪೀಡಿಸುತ್ತಿದ್ದರಂತೆ. ಆಗೆಲ್ಲಾ ವಿಜಯ್, ‘ಮೊದಲು ಓದು, ಸಿನಿಮಾ ಬೇಡ’ ಎಂದು ಹೇಳುತ್ತಿದ್ದರಂತೆ. ಕೊನೆಗೆ ಅಪ್ಪನನ್ನು ಒಪ್ಪಿಸುವಲ್ಲಿ ಮೋನಿಷಾ ಯಶಸ್ವಿಯಾಗಿದ್ದಾರೆ. ಬ್ಯಾಚುಲರ್‍ ಆಫ್‍ ಥಿಯೇಟರ್‍ ಮುಗಿಸಿರುವ ಮೋನಿಷಾಗೆ ರಂಗಭೂಮಿಯಲ್ಲಿ ಸಿಕ್ಕ ಅನುಭವ ಇನ್ನಷ್ಟು ವಿಶ್ವಾಸ ಹೆಚ್ಚಿಸಿತಂತೆ. ಅದೇ ವಿಶ್ವಾಸ ವಿಜಯ್‍ ಅವರನ್ನೂ ಒಪ್ಪಿಸಲಿಕ್ಕೆ ಸಾಧ್ಯವಾಯಿತು ಎಂದು ಮೋನಿಷಾ ನಂಬಿಕೆ. ಆ ನಂತರ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಪದವಿ ಪಡೆಯುವುದಕ್ಕೆ ಅಮೇರಿಕಾಗೆ ಹಾರಿದ್ದಾರೆ. ಅಲ್ಲಿಂದ ಬಂದು ಇದೀಗ ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಪೋಸ್ಟರ್ ಮಾತ್ರ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ. ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ‘ರಾಚಯ್ಯ’ ಚಿತ್ರದ ಮೂರನೇ ಹಂತದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದ್ದು, ಬಹುಶಃ ಈ ವರ್ಷಾಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

 

 

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago