vinay rajkumar andondittu kaala melody Kannada song Are Are Yaro Evalu
‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ…’ ಎಂಬ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಲಾಗಿದೆ.
‘ಅರೆರೆ ಯಾರೋ ಇವಳು …’ ಎಂದು ಸಾಗುವ ಈ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ವಿನಯ್ ರಾಜಕುಮಾರ್ ಹಾಗೂ ನಿಶಾ ಕಾಣಿಸಿಕೊಂಡಿದ್ದಾರೆ. ನಿಹಾಲ್ ತಾರೋ ಧ್ವನಿಯಾಗಿರುವ ಹಾಡಿಗೆ ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ವಿನಯ್ ರಾಜಕುಮಾರ್ 16 ವರ್ಷದ ಯುವಕನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡಿದ ವಿನಯ್ ರಾಜಕುಮಾರ್, ‘ಇದು ನನ್ನ ಮೆಚ್ಚಿನ ಗೀತೆ. ನಾನು ನಿರ್ದೇಶಕ ಕೀರ್ತಿಗೆ ಇದನ್ನೇ ಮೊದಲು ಬಿಡುಗಡೆ ಮಾಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದೇನೆ. ಅದು ನಿಜವಾಗಲೂ ಸವಾಲಾಗಿತ್ತು. ಸಾಕಷ್ಟು ತೂಕ ಕಡಿಮೆ ಮಾಡಿಕೊಂಡು ಕಾಣಿಸಿಕೊಂಡಿದ್ದೇನೆ. ಹಾಡು ತುಂಬಾ ಚೆನ್ನಾಗಿ ಬಂದಿದೆ. ಚಿತ್ರದಲ್ಲಿ ಶಾಲಾ ದಿನಗಳಲ್ಲಿ ಇಷ್ಟಪಟ್ಟ ಹುಡುಗಿಯ ಹಿಂದೆ ಓಡಾಡಿದ್ದೇನೆ. ಆದರೆ, ನಿಜ ಜೀವನದಲ್ಲಿ ಹತ್ತನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಮೂರು ಶೇಡ್ಗಳಿವೆ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.
ಈ ಹಾಡಿನಲ್ಲಿ ಶಾಲಾ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿರುವ ನಿಶಾ ರವಿಕೃಷ್ಣನ್, ‘ಇದರಲ್ಲಿ ನನ್ನದೊಂದು ಸಣ್ಣ ಪಾತ್ರವಾದರೂ ಬಹಳ ಮುಖ್ಯವಾದ ಪಾತ್ರ. ವಿನಯ್ ರಾಜಕುಮಾರ್ ಜೊತೆ ಅಭಿನಯಿಸಿದ್ದು ಖುಷಿ ತಂದಿದೆ’ ಎಂದರು.
ಭುವನ್ ಮ್ಯೂವಿಸ್ ಬ್ಯಾನರ್ ಅಡಿ ಭುವನ್ ಸುರೇಶ್ ನಿರ್ಮಿಸಿರುವ ಈ ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್ ಮುಂತಾದವರು ನಟಿಸಿದ್ದು, ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತಿ ಕೃಷ್ಣ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…