ಮನರಂಜನೆ

ಮಾಸ್ ಆದ ವಿನಯ್‍ ರಾಜಕುಮಾರ್, ‘ಪೆಪೆ’ ಚಿತ್ರಕ್ಕೆ ‘ಎ’

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.

‘ಪೆಪೆ’ ಒಂದು ಆ್ಯಕ್ಷನ್‍ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್‍ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್‍ ಎಸ್ ನಾಯರ್‍ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಪೆಪೆ’ ಚಿತ್ರದಲ್ಲಿ ವಿನಯ್‍ಗೆ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.

ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

1 hour ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

2 hours ago

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…

2 hours ago

ರೈಲ್ವೆ ಕಂಬಿಗಳಿಗೆ ತಂತಿ ಜಾಲರಿ ಅಳವಡಿಕೆ ಪ್ರಯೋಗ ಯಶಸ್ವಿ

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…

2 hours ago

ಕ್ಯಾನ್ಸರ್ ಚಿಂತೆ ಬಿಡಿ, ಚಿಕಿತ್ಸೆ ಬಗ್ಗೆ ಗಮನ ಕೊಡಿ

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…

2 hours ago