ಮನರಂಜನೆ

ಮಾಸ್ ಆದ ವಿನಯ್‍ ರಾಜಕುಮಾರ್, ‘ಪೆಪೆ’ ಚಿತ್ರಕ್ಕೆ ‘ಎ’

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.

‘ಪೆಪೆ’ ಒಂದು ಆ್ಯಕ್ಷನ್‍ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್‍ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್‍ ಎಸ್ ನಾಯರ್‍ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಪೆಪೆ’ ಚಿತ್ರದಲ್ಲಿ ವಿನಯ್‍ಗೆ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.

ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

9 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

18 mins ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

29 mins ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

33 mins ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

53 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

1 hour ago