ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್ ಅವರ ಮಗ ವಿನಯ್ ರಾಜಕುಮಾರ್, ಇದೀಗ ಮಾಸ್ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.
‘ಪೆಪೆ’ ಒಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.
ಹಳ್ಳಿ ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್ ಎಸ್ ನಾಯರ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.
‘ಪೆಪೆ’ ಚಿತ್ರದಲ್ಲಿ ವಿನಯ್ಗೆ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.
ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್ ಬ್ಯಾನರ್ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.
ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…