ಮನರಂಜನೆ

ಮಾಸ್ ಆದ ವಿನಯ್‍ ರಾಜಕುಮಾರ್, ‘ಪೆಪೆ’ ಚಿತ್ರಕ್ಕೆ ‘ಎ’

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.

‘ಪೆಪೆ’ ಒಂದು ಆ್ಯಕ್ಷನ್‍ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್‍ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್‍ ಎಸ್ ನಾಯರ್‍ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಪೆಪೆ’ ಚಿತ್ರದಲ್ಲಿ ವಿನಯ್‍ಗೆ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.

ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

8 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

9 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

9 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

14 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

14 hours ago