ಮನರಂಜನೆ

ಕಾಲ್ಪನಿಕ ಊರೊಂದರಲ್ಲಿ ನಾಲ್ಕು ಕುಟುಂಬಗಳ ಕಥೆ ಇದು…

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ವಿನಯ್, ‘ಈ ಚಿತ್ರದಲ್ಲಿ ನನ್ನ ಹೆಸರು ಪ್ರದೀಪ ಅಂತ. ಎಲ್ಲರೂ ಪೆಪೆ ಅಂತ ಕರೀತಾರೆ. ಅದೊಬ್ಬ ಫುಟ್ಬಾಲ್‍ ಆಟಗಾರನ ಹೆಸರು. ಅವರಿಂದ ಸ್ಫೂರ್ತಿಪಡೆದು ನಿರ್ದೇಶಕರು ಹೆಸರು ಇಟ್ಟಿರಬಹುದು. ಇದೊಂದು ಸಂಪೂರ್ಣ ಸೇಡಿನ ಕಥೆ ಅಂತ ಹೇಳೋದು ಕಷ್ಟ. ಒಂದು ಕಾಲ್ಪನಿಕ ಊರಲ್ಲಿ ನಾಲ್ಕು ಕುಟುಂಬಗಳ ನಡುವಿನ ಹೋರಾಟದ ಕಥೆ ಇದು. ಈ ಚಿತ್ರದಲ್ಲಿ ಹಲವು ಪಾತ್ರಗಳಿವೆ. ಜನರಿಗೆ ಮೊದಲೇ ಪರಿಚಯವಾಗಲೀ ಎಂದು ಫ್ಯಾಮಿಲಿ ಟ್ರೀ ಮತ್ತು ಪಾತ್ರಗಳ ನಡುವಿನ ಸಂಬಂಧ ಬಿಟ್ಟಿದ್ದೇವೆ. ಅದು ಗೊತ್ತಾದಾಗ, ಸಿನಿಮಾ ಅರ್ಥ ಮಾಡಿಕೊಳ್ಳುವುದಕ್ಕೆ ಸುಲಭವಾಗುತ್ತದೆ’ ಎಂದರು.

ಇದುವರೆಗೂ ಲವ್ವರ್ ಬಾಯ್‍ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿನಯ್‍, ಈ ಚಿತ್ರದಲ್ಲಿ ತಮ್ಮ ಶೈಲಿ ಬದಲಾಯಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೆಲವು ಕಥೆಗಳನ್ನು ಹೂಗಳ ಮೂಲಕ ಹೇಳಬೇಕು. ಕೆಲವು ಕಥೆಗಳನ್ನು ಮಚ್ಚು ಮೂಲಕ ಹೇಳಬೇಕು. ಈ ಕಥೆಗೆ ಮಚ್ಚು ಬೇಕಿತ್ತು. ಒಬ್ಬ ನಟನಾಗಿ ಎಲ್ಲಾ ಶೈಲಿಯ ಚಿತ್ರಗಳನ್ನೂ ಮಾಡಬೇಕು. ಆದರೆ, ಇದುವರೆಗೂ ನಾನು ಆ‍್ಯಕ್ಷನ್‍ ಚಿತ್ರ ಮಾಡಿರಲಿಲ್ಲ. ಇದು ನನಗೆ ಹೊಸ ಅನುಭವ. 10 ವರ್ಷದಿಂದ ಈ ತರಹದ ಪಾತ್ರಕ್ಕಾಗಿ ಕಾಯುತ್ತಿದ್ದೆ. ಇಲ್ಲಿ ಆ್ಯಕ್ಷನ್‍ ಜೊತೆಗೆ ಒಂದಿಷ್ಟು ವಿಷಯಗಳಿವೆ. ಹಾಗಾಗಿ, ಕಥೆ ಕೇಳಿ ತಕ್ಷಣವೇ ಒಪ್ಪಿಕೊಂಡೆ’ ಎಂದರು.

‘ಪೆಪೆ’ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ.

ಈ ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡಿದ್ದಾರೆ. ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

38 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago