ಮನರಂಜನೆ

ಕಾಲ್ಪನಿಕ ಊರೊಂದರಲ್ಲಿ ನಾಲ್ಕು ಕುಟುಂಬಗಳ ಕಥೆ ಇದು…

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ವಿನಯ್, ‘ಈ ಚಿತ್ರದಲ್ಲಿ ನನ್ನ ಹೆಸರು ಪ್ರದೀಪ ಅಂತ. ಎಲ್ಲರೂ ಪೆಪೆ ಅಂತ ಕರೀತಾರೆ. ಅದೊಬ್ಬ ಫುಟ್ಬಾಲ್‍ ಆಟಗಾರನ ಹೆಸರು. ಅವರಿಂದ ಸ್ಫೂರ್ತಿಪಡೆದು ನಿರ್ದೇಶಕರು ಹೆಸರು ಇಟ್ಟಿರಬಹುದು. ಇದೊಂದು ಸಂಪೂರ್ಣ ಸೇಡಿನ ಕಥೆ ಅಂತ ಹೇಳೋದು ಕಷ್ಟ. ಒಂದು ಕಾಲ್ಪನಿಕ ಊರಲ್ಲಿ ನಾಲ್ಕು ಕುಟುಂಬಗಳ ನಡುವಿನ ಹೋರಾಟದ ಕಥೆ ಇದು. ಈ ಚಿತ್ರದಲ್ಲಿ ಹಲವು ಪಾತ್ರಗಳಿವೆ. ಜನರಿಗೆ ಮೊದಲೇ ಪರಿಚಯವಾಗಲೀ ಎಂದು ಫ್ಯಾಮಿಲಿ ಟ್ರೀ ಮತ್ತು ಪಾತ್ರಗಳ ನಡುವಿನ ಸಂಬಂಧ ಬಿಟ್ಟಿದ್ದೇವೆ. ಅದು ಗೊತ್ತಾದಾಗ, ಸಿನಿಮಾ ಅರ್ಥ ಮಾಡಿಕೊಳ್ಳುವುದಕ್ಕೆ ಸುಲಭವಾಗುತ್ತದೆ’ ಎಂದರು.

ಇದುವರೆಗೂ ಲವ್ವರ್ ಬಾಯ್‍ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿನಯ್‍, ಈ ಚಿತ್ರದಲ್ಲಿ ತಮ್ಮ ಶೈಲಿ ಬದಲಾಯಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೆಲವು ಕಥೆಗಳನ್ನು ಹೂಗಳ ಮೂಲಕ ಹೇಳಬೇಕು. ಕೆಲವು ಕಥೆಗಳನ್ನು ಮಚ್ಚು ಮೂಲಕ ಹೇಳಬೇಕು. ಈ ಕಥೆಗೆ ಮಚ್ಚು ಬೇಕಿತ್ತು. ಒಬ್ಬ ನಟನಾಗಿ ಎಲ್ಲಾ ಶೈಲಿಯ ಚಿತ್ರಗಳನ್ನೂ ಮಾಡಬೇಕು. ಆದರೆ, ಇದುವರೆಗೂ ನಾನು ಆ‍್ಯಕ್ಷನ್‍ ಚಿತ್ರ ಮಾಡಿರಲಿಲ್ಲ. ಇದು ನನಗೆ ಹೊಸ ಅನುಭವ. 10 ವರ್ಷದಿಂದ ಈ ತರಹದ ಪಾತ್ರಕ್ಕಾಗಿ ಕಾಯುತ್ತಿದ್ದೆ. ಇಲ್ಲಿ ಆ್ಯಕ್ಷನ್‍ ಜೊತೆಗೆ ಒಂದಿಷ್ಟು ವಿಷಯಗಳಿವೆ. ಹಾಗಾಗಿ, ಕಥೆ ಕೇಳಿ ತಕ್ಷಣವೇ ಒಪ್ಪಿಕೊಂಡೆ’ ಎಂದರು.

‘ಪೆಪೆ’ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ.

ಈ ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡಿದ್ದಾರೆ. ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಗೃಹಲಕ್ಷ್ಮಿ ಗದ್ದಲ : ಸರ್ಕಾರದ ವಿರುದ್ಧ ವಿಪಕ್ಷ ಆಕ್ರೋಶ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20…

10 mins ago

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ತಪಾಸಣೆ: ಕೈದಿಗಳ ಬಳಿ ಮಾರಕಾಸ್ತ್ರಗಳು ಪತ್ತೆ

ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…

2 hours ago

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…

3 hours ago

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…

3 hours ago

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…

3 hours ago

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

4 hours ago