ಮನರಂಜನೆ

ಕಾಲ್ಪನಿಕ ಊರೊಂದರಲ್ಲಿ ನಾಲ್ಕು ಕುಟುಂಬಗಳ ಕಥೆ ಇದು…

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ವಿನಯ್, ‘ಈ ಚಿತ್ರದಲ್ಲಿ ನನ್ನ ಹೆಸರು ಪ್ರದೀಪ ಅಂತ. ಎಲ್ಲರೂ ಪೆಪೆ ಅಂತ ಕರೀತಾರೆ. ಅದೊಬ್ಬ ಫುಟ್ಬಾಲ್‍ ಆಟಗಾರನ ಹೆಸರು. ಅವರಿಂದ ಸ್ಫೂರ್ತಿಪಡೆದು ನಿರ್ದೇಶಕರು ಹೆಸರು ಇಟ್ಟಿರಬಹುದು. ಇದೊಂದು ಸಂಪೂರ್ಣ ಸೇಡಿನ ಕಥೆ ಅಂತ ಹೇಳೋದು ಕಷ್ಟ. ಒಂದು ಕಾಲ್ಪನಿಕ ಊರಲ್ಲಿ ನಾಲ್ಕು ಕುಟುಂಬಗಳ ನಡುವಿನ ಹೋರಾಟದ ಕಥೆ ಇದು. ಈ ಚಿತ್ರದಲ್ಲಿ ಹಲವು ಪಾತ್ರಗಳಿವೆ. ಜನರಿಗೆ ಮೊದಲೇ ಪರಿಚಯವಾಗಲೀ ಎಂದು ಫ್ಯಾಮಿಲಿ ಟ್ರೀ ಮತ್ತು ಪಾತ್ರಗಳ ನಡುವಿನ ಸಂಬಂಧ ಬಿಟ್ಟಿದ್ದೇವೆ. ಅದು ಗೊತ್ತಾದಾಗ, ಸಿನಿಮಾ ಅರ್ಥ ಮಾಡಿಕೊಳ್ಳುವುದಕ್ಕೆ ಸುಲಭವಾಗುತ್ತದೆ’ ಎಂದರು.

ಇದುವರೆಗೂ ಲವ್ವರ್ ಬಾಯ್‍ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿನಯ್‍, ಈ ಚಿತ್ರದಲ್ಲಿ ತಮ್ಮ ಶೈಲಿ ಬದಲಾಯಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೆಲವು ಕಥೆಗಳನ್ನು ಹೂಗಳ ಮೂಲಕ ಹೇಳಬೇಕು. ಕೆಲವು ಕಥೆಗಳನ್ನು ಮಚ್ಚು ಮೂಲಕ ಹೇಳಬೇಕು. ಈ ಕಥೆಗೆ ಮಚ್ಚು ಬೇಕಿತ್ತು. ಒಬ್ಬ ನಟನಾಗಿ ಎಲ್ಲಾ ಶೈಲಿಯ ಚಿತ್ರಗಳನ್ನೂ ಮಾಡಬೇಕು. ಆದರೆ, ಇದುವರೆಗೂ ನಾನು ಆ‍್ಯಕ್ಷನ್‍ ಚಿತ್ರ ಮಾಡಿರಲಿಲ್ಲ. ಇದು ನನಗೆ ಹೊಸ ಅನುಭವ. 10 ವರ್ಷದಿಂದ ಈ ತರಹದ ಪಾತ್ರಕ್ಕಾಗಿ ಕಾಯುತ್ತಿದ್ದೆ. ಇಲ್ಲಿ ಆ್ಯಕ್ಷನ್‍ ಜೊತೆಗೆ ಒಂದಿಷ್ಟು ವಿಷಯಗಳಿವೆ. ಹಾಗಾಗಿ, ಕಥೆ ಕೇಳಿ ತಕ್ಷಣವೇ ಒಪ್ಪಿಕೊಂಡೆ’ ಎಂದರು.

‘ಪೆಪೆ’ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ.

ಈ ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡಿದ್ದಾರೆ. ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

8 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

13 mins ago

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ…

15 mins ago

ಪ್ರಧಾನಿ ನರೇಂದ್ರ ಮೋದಿ ದೇಶವನ್ನೇ ಮಾಡಿದ್ದಾರೆ: ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ…

18 mins ago

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್ಎಸ್ಎಲ್‍ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ…

21 mins ago

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…

38 mins ago