ಮನರಂಜನೆ

ಕಾಲ್ಪನಿಕ ಊರೊಂದರಲ್ಲಿ ನಾಲ್ಕು ಕುಟುಂಬಗಳ ಕಥೆ ಇದು…

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ವಿನಯ್, ‘ಈ ಚಿತ್ರದಲ್ಲಿ ನನ್ನ ಹೆಸರು ಪ್ರದೀಪ ಅಂತ. ಎಲ್ಲರೂ ಪೆಪೆ ಅಂತ ಕರೀತಾರೆ. ಅದೊಬ್ಬ ಫುಟ್ಬಾಲ್‍ ಆಟಗಾರನ ಹೆಸರು. ಅವರಿಂದ ಸ್ಫೂರ್ತಿಪಡೆದು ನಿರ್ದೇಶಕರು ಹೆಸರು ಇಟ್ಟಿರಬಹುದು. ಇದೊಂದು ಸಂಪೂರ್ಣ ಸೇಡಿನ ಕಥೆ ಅಂತ ಹೇಳೋದು ಕಷ್ಟ. ಒಂದು ಕಾಲ್ಪನಿಕ ಊರಲ್ಲಿ ನಾಲ್ಕು ಕುಟುಂಬಗಳ ನಡುವಿನ ಹೋರಾಟದ ಕಥೆ ಇದು. ಈ ಚಿತ್ರದಲ್ಲಿ ಹಲವು ಪಾತ್ರಗಳಿವೆ. ಜನರಿಗೆ ಮೊದಲೇ ಪರಿಚಯವಾಗಲೀ ಎಂದು ಫ್ಯಾಮಿಲಿ ಟ್ರೀ ಮತ್ತು ಪಾತ್ರಗಳ ನಡುವಿನ ಸಂಬಂಧ ಬಿಟ್ಟಿದ್ದೇವೆ. ಅದು ಗೊತ್ತಾದಾಗ, ಸಿನಿಮಾ ಅರ್ಥ ಮಾಡಿಕೊಳ್ಳುವುದಕ್ಕೆ ಸುಲಭವಾಗುತ್ತದೆ’ ಎಂದರು.

ಇದುವರೆಗೂ ಲವ್ವರ್ ಬಾಯ್‍ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿನಯ್‍, ಈ ಚಿತ್ರದಲ್ಲಿ ತಮ್ಮ ಶೈಲಿ ಬದಲಾಯಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೆಲವು ಕಥೆಗಳನ್ನು ಹೂಗಳ ಮೂಲಕ ಹೇಳಬೇಕು. ಕೆಲವು ಕಥೆಗಳನ್ನು ಮಚ್ಚು ಮೂಲಕ ಹೇಳಬೇಕು. ಈ ಕಥೆಗೆ ಮಚ್ಚು ಬೇಕಿತ್ತು. ಒಬ್ಬ ನಟನಾಗಿ ಎಲ್ಲಾ ಶೈಲಿಯ ಚಿತ್ರಗಳನ್ನೂ ಮಾಡಬೇಕು. ಆದರೆ, ಇದುವರೆಗೂ ನಾನು ಆ‍್ಯಕ್ಷನ್‍ ಚಿತ್ರ ಮಾಡಿರಲಿಲ್ಲ. ಇದು ನನಗೆ ಹೊಸ ಅನುಭವ. 10 ವರ್ಷದಿಂದ ಈ ತರಹದ ಪಾತ್ರಕ್ಕಾಗಿ ಕಾಯುತ್ತಿದ್ದೆ. ಇಲ್ಲಿ ಆ್ಯಕ್ಷನ್‍ ಜೊತೆಗೆ ಒಂದಿಷ್ಟು ವಿಷಯಗಳಿವೆ. ಹಾಗಾಗಿ, ಕಥೆ ಕೇಳಿ ತಕ್ಷಣವೇ ಒಪ್ಪಿಕೊಂಡೆ’ ಎಂದರು.

‘ಪೆಪೆ’ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ.

ಈ ಚಿತ್ರವನ್ನು ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮಾಡಿದ್ದಾರೆ. ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

5 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

5 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

10 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

12 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

14 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

14 hours ago