ಮನರಂಜನೆ

ಚಾಕೊಲೇಟ್‍ ಬಾಯ್‍ ಆಗಿದ್ದ ವಿನಯ್‍ ವಯಸ್ಕನಾದ: ಸುದೀಪ್‍

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ.

ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ ಆ್ಯಕ್ಷನ್‍ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‍ನಲ್ಲಿ ಸಾಕಷ್ಟು ಆ್ಯಕ್ಷನ್‍ ಮತ್ತು ರಕ್ತಪಾತವಿದ್ದು, ವಿನಯ್‍ಗೆ ಇದು ಬೇರೆಯದೇ ರೀತಿಯ ಪಾತ್ರವಾಗಿದೆ.

‘ಪೆಪೆ’ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಮಾತನಾಡಿದ ಸುದೀಪ್‍, ‘ಕನ್ನಡ ಚಿತ್ರರಂಗ ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಸತತವಾಗಿ ಚಿತ್ರಗಳು ಸೋಲುತ್ತಿವೆ. ಕನ್ನಡ ಚಿತ್ರರಂಗಕ್ಕೆ ಇದೀಗ 90 ವರ್ಷ ತುಂಬಿದ್ದು, ಆಲದ ಮರವಾಗಿದೆ. ಇದಕ್ಕೂ ಮುನ್ನ ಹಲವು ಸಮಸ್ಯೆ ಮತ್ತು ಸೋಲುಗಳನ್ನು ನೋಡಿದೆ. ಈ ಸೋಲು ಮತ್ತು ಗೆಲುವು ಎಂಬುದು ಋತುಗಳಿದ್ದಂತೆ. ಒಂದರ ಹಿಂದೊಂದು ಬರುತ್ತಿರಬೇಕು. ಹಾಗೆ ನೋಡಿದರೆ, ಗೆಲುವಿಗಿಂತ ಸೋಲುಗಳನ ಸಂಖ್ಯೆ ಜಾಸ್ತಿ. ಆದರೂ ಚಿತ್ರರಂಗ ಮುನ್ನಡೆಯುತ್ತಿದೆ. ನಾನು ನನ್ನ ಚಿತ್ರಜೀವನದಲ್ಲಿ ಹಲವು ಸೋಲುಗಳನ್ನು ಕಂಡಿದ್ದೇನೆ. ಆದರೆ, ಅದು ಶಾಶ್ವತವಲ್ಲ. ಅದರಿಂದ ಆಚೆ ಬಂದು ಸಿನಿಮಾಗಳನ್ನು ಮಾಡುತ್ತಿರಬೇಕು. ಪ್ರೇಕ್ಷಕರನ್ನು ನಂಬಿ ಕೆಲಸ ಮಾಡುತ್ತಿರಬೇಕು. ನಮ್ಮ ಕೆಲಸ ಇಷ್ಟವಾದರೆ, ಖಂಡಿತಾ ಅವರು ನಮ್ಮ ಕೈ ಹಿಡಿಯುತ್ತಾರೆ’ ಎಂದು ಸುದೀಪ್‍ ಹೇಳಿದ್ದಾರೆ.

ಇನ್ನು, ‘ಪೆಪೆ’ ಚಿತ್ರದ ಕುರಿತು ಮಾತನಾಡಿದ ಸುದೀಪ್‍, ‘ನಾನು ಹಲವು ಟ್ರೇಲರ್‍ ಮತ್ತು ಟೀಸರ್‍ಗಳನ್ನು ಬಿಡುಗಡೆ ಮಾಡುತ್ತಿರುತ್ತಾನೆ. ಒಳ್ಳೆಯ ಕೆಲಸ ನೋಡಿದಾಗ ಖುಷಿಯಾಗುತ್ತಿದೆ. ಈ ಚಿತ್ರದ ಟ್ರೇಲರ್ ನೋಡಿದಾಗ, ಚಿತ್ರ ನೋಡಬೇಕು ಎಂದು ಕುತೂಹಲ ಮಾಡುತ್ತಿದೆ. ವಿನಯ್‍ ಇದುವರೆಗೂ ‘ಚಾಕೊಲೇಟ್‍ ಬಾಯ್‍’ ಪಾತ್ರಗಳನ್ನು ಮಾಡುತ್ತಿದ್ದರು. ಈ ಚಿತ್ರದ ನಂತರ ವಯಸ್ಕರಾಗಿದ್ದಾರೆ’ ಎಂದರು.

‘ಪೆಪೆ’ ಚಿತ್ರವನ್ನು ಶ್ರೀಲೇಶ್ ಎಸ್. ನಾಯರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಮ್. ಶ್ರೀರಾಮ್ ನಿರ್ಮಿಸಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ಗೆ ನಾಯಕಿಯಾಗಿ ಕಾಜಲ್‍ ಕುಂದರ್‍ ಅಭಿನಯಿಸಿದ್ದು, ಮಿಕ್ಕಂತೆ ಯಶ್‍ ಶೆಟ್ಟಿ, ಮೇದಿನಿ ಕೆಳಮನೆ, ಅರುಣ ಬಾಲರಾಜ್ ನವೀನ್‍ ಡಿ ಪಡೀಲ್‍, ಬಲ ರಾಜವಾಡಿ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

32 mins ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

47 mins ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

1 hour ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

1 hour ago

ಓದುಗರ ಪತ್ರ: ಕಬ್ಬಿಣದ ಸಲಾಕೆ ತೆರವುಗೊಳಿಸಿ

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…

1 hour ago

ಓದುಗರ ಪತ್ರ: ಹೈಡ್ರೋಪೋನಿಕ್ಸ್ ಟೆಕ್‌ಪಾರ್ಕ್ ಸ್ಥಾಪಿಸಿ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…

1 hour ago