ಮನರಂಜನೆ

ಚಾಕೊಲೇಟ್‍ ಬಾಯ್‍ ಆಗಿದ್ದ ವಿನಯ್‍ ವಯಸ್ಕನಾದ: ಸುದೀಪ್‍

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ.

ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ ಆ್ಯಕ್ಷನ್‍ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‍ನಲ್ಲಿ ಸಾಕಷ್ಟು ಆ್ಯಕ್ಷನ್‍ ಮತ್ತು ರಕ್ತಪಾತವಿದ್ದು, ವಿನಯ್‍ಗೆ ಇದು ಬೇರೆಯದೇ ರೀತಿಯ ಪಾತ್ರವಾಗಿದೆ.

‘ಪೆಪೆ’ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಮಾತನಾಡಿದ ಸುದೀಪ್‍, ‘ಕನ್ನಡ ಚಿತ್ರರಂಗ ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಸತತವಾಗಿ ಚಿತ್ರಗಳು ಸೋಲುತ್ತಿವೆ. ಕನ್ನಡ ಚಿತ್ರರಂಗಕ್ಕೆ ಇದೀಗ 90 ವರ್ಷ ತುಂಬಿದ್ದು, ಆಲದ ಮರವಾಗಿದೆ. ಇದಕ್ಕೂ ಮುನ್ನ ಹಲವು ಸಮಸ್ಯೆ ಮತ್ತು ಸೋಲುಗಳನ್ನು ನೋಡಿದೆ. ಈ ಸೋಲು ಮತ್ತು ಗೆಲುವು ಎಂಬುದು ಋತುಗಳಿದ್ದಂತೆ. ಒಂದರ ಹಿಂದೊಂದು ಬರುತ್ತಿರಬೇಕು. ಹಾಗೆ ನೋಡಿದರೆ, ಗೆಲುವಿಗಿಂತ ಸೋಲುಗಳನ ಸಂಖ್ಯೆ ಜಾಸ್ತಿ. ಆದರೂ ಚಿತ್ರರಂಗ ಮುನ್ನಡೆಯುತ್ತಿದೆ. ನಾನು ನನ್ನ ಚಿತ್ರಜೀವನದಲ್ಲಿ ಹಲವು ಸೋಲುಗಳನ್ನು ಕಂಡಿದ್ದೇನೆ. ಆದರೆ, ಅದು ಶಾಶ್ವತವಲ್ಲ. ಅದರಿಂದ ಆಚೆ ಬಂದು ಸಿನಿಮಾಗಳನ್ನು ಮಾಡುತ್ತಿರಬೇಕು. ಪ್ರೇಕ್ಷಕರನ್ನು ನಂಬಿ ಕೆಲಸ ಮಾಡುತ್ತಿರಬೇಕು. ನಮ್ಮ ಕೆಲಸ ಇಷ್ಟವಾದರೆ, ಖಂಡಿತಾ ಅವರು ನಮ್ಮ ಕೈ ಹಿಡಿಯುತ್ತಾರೆ’ ಎಂದು ಸುದೀಪ್‍ ಹೇಳಿದ್ದಾರೆ.

ಇನ್ನು, ‘ಪೆಪೆ’ ಚಿತ್ರದ ಕುರಿತು ಮಾತನಾಡಿದ ಸುದೀಪ್‍, ‘ನಾನು ಹಲವು ಟ್ರೇಲರ್‍ ಮತ್ತು ಟೀಸರ್‍ಗಳನ್ನು ಬಿಡುಗಡೆ ಮಾಡುತ್ತಿರುತ್ತಾನೆ. ಒಳ್ಳೆಯ ಕೆಲಸ ನೋಡಿದಾಗ ಖುಷಿಯಾಗುತ್ತಿದೆ. ಈ ಚಿತ್ರದ ಟ್ರೇಲರ್ ನೋಡಿದಾಗ, ಚಿತ್ರ ನೋಡಬೇಕು ಎಂದು ಕುತೂಹಲ ಮಾಡುತ್ತಿದೆ. ವಿನಯ್‍ ಇದುವರೆಗೂ ‘ಚಾಕೊಲೇಟ್‍ ಬಾಯ್‍’ ಪಾತ್ರಗಳನ್ನು ಮಾಡುತ್ತಿದ್ದರು. ಈ ಚಿತ್ರದ ನಂತರ ವಯಸ್ಕರಾಗಿದ್ದಾರೆ’ ಎಂದರು.

‘ಪೆಪೆ’ ಚಿತ್ರವನ್ನು ಶ್ರೀಲೇಶ್ ಎಸ್. ನಾಯರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಮ್. ಶ್ರೀರಾಮ್ ನಿರ್ಮಿಸಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ಗೆ ನಾಯಕಿಯಾಗಿ ಕಾಜಲ್‍ ಕುಂದರ್‍ ಅಭಿನಯಿಸಿದ್ದು, ಮಿಕ್ಕಂತೆ ಯಶ್‍ ಶೆಟ್ಟಿ, ಮೇದಿನಿ ಕೆಳಮನೆ, ಅರುಣ ಬಾಲರಾಜ್ ನವೀನ್‍ ಡಿ ಪಡೀಲ್‍, ಬಲ ರಾಜವಾಡಿ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

7 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

7 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

7 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

7 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

8 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

8 hours ago