ಮನರಂಜನೆ

ಚಾಕೊಲೇಟ್‍ ಬಾಯ್‍ ಆಗಿದ್ದ ವಿನಯ್‍ ವಯಸ್ಕನಾದ: ಸುದೀಪ್‍

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ.

ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ ಆ್ಯಕ್ಷನ್‍ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‍ನಲ್ಲಿ ಸಾಕಷ್ಟು ಆ್ಯಕ್ಷನ್‍ ಮತ್ತು ರಕ್ತಪಾತವಿದ್ದು, ವಿನಯ್‍ಗೆ ಇದು ಬೇರೆಯದೇ ರೀತಿಯ ಪಾತ್ರವಾಗಿದೆ.

‘ಪೆಪೆ’ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಮಾತನಾಡಿದ ಸುದೀಪ್‍, ‘ಕನ್ನಡ ಚಿತ್ರರಂಗ ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಸತತವಾಗಿ ಚಿತ್ರಗಳು ಸೋಲುತ್ತಿವೆ. ಕನ್ನಡ ಚಿತ್ರರಂಗಕ್ಕೆ ಇದೀಗ 90 ವರ್ಷ ತುಂಬಿದ್ದು, ಆಲದ ಮರವಾಗಿದೆ. ಇದಕ್ಕೂ ಮುನ್ನ ಹಲವು ಸಮಸ್ಯೆ ಮತ್ತು ಸೋಲುಗಳನ್ನು ನೋಡಿದೆ. ಈ ಸೋಲು ಮತ್ತು ಗೆಲುವು ಎಂಬುದು ಋತುಗಳಿದ್ದಂತೆ. ಒಂದರ ಹಿಂದೊಂದು ಬರುತ್ತಿರಬೇಕು. ಹಾಗೆ ನೋಡಿದರೆ, ಗೆಲುವಿಗಿಂತ ಸೋಲುಗಳನ ಸಂಖ್ಯೆ ಜಾಸ್ತಿ. ಆದರೂ ಚಿತ್ರರಂಗ ಮುನ್ನಡೆಯುತ್ತಿದೆ. ನಾನು ನನ್ನ ಚಿತ್ರಜೀವನದಲ್ಲಿ ಹಲವು ಸೋಲುಗಳನ್ನು ಕಂಡಿದ್ದೇನೆ. ಆದರೆ, ಅದು ಶಾಶ್ವತವಲ್ಲ. ಅದರಿಂದ ಆಚೆ ಬಂದು ಸಿನಿಮಾಗಳನ್ನು ಮಾಡುತ್ತಿರಬೇಕು. ಪ್ರೇಕ್ಷಕರನ್ನು ನಂಬಿ ಕೆಲಸ ಮಾಡುತ್ತಿರಬೇಕು. ನಮ್ಮ ಕೆಲಸ ಇಷ್ಟವಾದರೆ, ಖಂಡಿತಾ ಅವರು ನಮ್ಮ ಕೈ ಹಿಡಿಯುತ್ತಾರೆ’ ಎಂದು ಸುದೀಪ್‍ ಹೇಳಿದ್ದಾರೆ.

ಇನ್ನು, ‘ಪೆಪೆ’ ಚಿತ್ರದ ಕುರಿತು ಮಾತನಾಡಿದ ಸುದೀಪ್‍, ‘ನಾನು ಹಲವು ಟ್ರೇಲರ್‍ ಮತ್ತು ಟೀಸರ್‍ಗಳನ್ನು ಬಿಡುಗಡೆ ಮಾಡುತ್ತಿರುತ್ತಾನೆ. ಒಳ್ಳೆಯ ಕೆಲಸ ನೋಡಿದಾಗ ಖುಷಿಯಾಗುತ್ತಿದೆ. ಈ ಚಿತ್ರದ ಟ್ರೇಲರ್ ನೋಡಿದಾಗ, ಚಿತ್ರ ನೋಡಬೇಕು ಎಂದು ಕುತೂಹಲ ಮಾಡುತ್ತಿದೆ. ವಿನಯ್‍ ಇದುವರೆಗೂ ‘ಚಾಕೊಲೇಟ್‍ ಬಾಯ್‍’ ಪಾತ್ರಗಳನ್ನು ಮಾಡುತ್ತಿದ್ದರು. ಈ ಚಿತ್ರದ ನಂತರ ವಯಸ್ಕರಾಗಿದ್ದಾರೆ’ ಎಂದರು.

‘ಪೆಪೆ’ ಚಿತ್ರವನ್ನು ಶ್ರೀಲೇಶ್ ಎಸ್. ನಾಯರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಮ್. ಶ್ರೀರಾಮ್ ನಿರ್ಮಿಸಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ವಿನಯ್‍ ರಾಜಕುಮಾರ್‍ಗೆ ನಾಯಕಿಯಾಗಿ ಕಾಜಲ್‍ ಕುಂದರ್‍ ಅಭಿನಯಿಸಿದ್ದು, ಮಿಕ್ಕಂತೆ ಯಶ್‍ ಶೆಟ್ಟಿ, ಮೇದಿನಿ ಕೆಳಮನೆ, ಅರುಣ ಬಾಲರಾಜ್ ನವೀನ್‍ ಡಿ ಪಡೀಲ್‍, ಬಲ ರಾಜವಾಡಿ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago