ಬೆಂಗಳೂರು: ಇಂದು (ಜೂನ್.16) ವಿಶ್ವ ಅಪ್ಪಂದಿರ ದಿನ. ಕನ್ನಡದ ಸ್ಟಾರ್ ನಟ ದರ್ಶನ್ ಪುತ್ರ ವಿನೀಶ್ ದರ್ಶನ್ ಅವರು ತಮ್ಮ ತಂದೆ ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್ ನೆನೆದು ಅವರ ಮಗ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಅಪ್ಪಂದಿರ ದಿನದ ಶುಭಾಷಯ ಕೋರಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಂದೆ ದರ್ಶನ್ ಹಾಗೂ ತಾಯಿ ವಿಜಯಲಕ್ಷ್ಮಿ ಜತೆಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಂದೆಗೆ ವಿಷ್ ಮಾಡಿದ್ದಾರೆ ವಿನೀಶ್.
ಇನ್ನು ಆ ಫೋಟೋ ಮೇಲೆ “ಅಪ್ಪಂದಿರ ದಿನದ ಶುಭಾಷಯಗಳು ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತಿದ್ದು, ನನ್ನ ಪಾಲಿಗೆ ಯಾವತ್ತಿಗೂ ನೀವೇ ಹೀರೋ” ಎಂದು ಬರೆದುಕೊಂಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಜೂನ್.20 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ದರ್ಶನ್ ವಚಾರಣೆ ಎದುರಿಸುತ್ತಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…