ಬೆಂಗಳೂರು: ಇಂದು (ಜೂನ್.16) ವಿಶ್ವ ಅಪ್ಪಂದಿರ ದಿನ. ಕನ್ನಡದ ಸ್ಟಾರ್ ನಟ ದರ್ಶನ್ ಪುತ್ರ ವಿನೀಶ್ ದರ್ಶನ್ ಅವರು ತಮ್ಮ ತಂದೆ ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್ ನೆನೆದು ಅವರ ಮಗ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಅಪ್ಪಂದಿರ ದಿನದ ಶುಭಾಷಯ ಕೋರಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಂದೆ ದರ್ಶನ್ ಹಾಗೂ ತಾಯಿ ವಿಜಯಲಕ್ಷ್ಮಿ ಜತೆಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಂದೆಗೆ ವಿಷ್ ಮಾಡಿದ್ದಾರೆ ವಿನೀಶ್.
ಇನ್ನು ಆ ಫೋಟೋ ಮೇಲೆ “ಅಪ್ಪಂದಿರ ದಿನದ ಶುಭಾಷಯಗಳು ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತಿದ್ದು, ನನ್ನ ಪಾಲಿಗೆ ಯಾವತ್ತಿಗೂ ನೀವೇ ಹೀರೋ” ಎಂದು ಬರೆದುಕೊಂಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಜೂನ್.20 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ದರ್ಶನ್ ವಚಾರಣೆ ಎದುರಿಸುತ್ತಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…