ಬೆಂಗಳೂರು: ಇಂದು (ಜೂನ್.16) ವಿಶ್ವ ಅಪ್ಪಂದಿರ ದಿನ. ಕನ್ನಡದ ಸ್ಟಾರ್ ನಟ ದರ್ಶನ್ ಪುತ್ರ ವಿನೀಶ್ ದರ್ಶನ್ ಅವರು ತಮ್ಮ ತಂದೆ ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್ ನೆನೆದು ಅವರ ಮಗ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಅಪ್ಪಂದಿರ ದಿನದ ಶುಭಾಷಯ ಕೋರಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಂದೆ ದರ್ಶನ್ ಹಾಗೂ ತಾಯಿ ವಿಜಯಲಕ್ಷ್ಮಿ ಜತೆಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಂದೆಗೆ ವಿಷ್ ಮಾಡಿದ್ದಾರೆ ವಿನೀಶ್.
ಇನ್ನು ಆ ಫೋಟೋ ಮೇಲೆ “ಅಪ್ಪಂದಿರ ದಿನದ ಶುಭಾಷಯಗಳು ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತಿದ್ದು, ನನ್ನ ಪಾಲಿಗೆ ಯಾವತ್ತಿಗೂ ನೀವೇ ಹೀರೋ” ಎಂದು ಬರೆದುಕೊಂಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಜೂನ್.20 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ದರ್ಶನ್ ವಚಾರಣೆ ಎದುರಿಸುತ್ತಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…