ಮನರಂಜನೆ

ಮೇ 30 ಅಲ್ಲ, ಜೂನ್ 6 ರಂದು ಬಿಡುಗಡೆಯಾಗಲಿದೆ ‘ಮಾದೇವ’

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್‍ 06ರಂದು ಬಿಡುಗಡೆಯಾಗುತ್ತಿದೆ.

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ನಿರ್ದೇಶನದ ‘ಮಾದೇವ’ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಿಸಿದೆ.

ಈ ಸಂದರ್ಭದಲ್ಲಿ ಮತನಾಡಿದ ನಿರ್ದೇಶಕ ನವೀನ್‍ ರೆಡ್ಡಿ, ‘ಮಾದೇವ’ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ನೇಣಿಗೆ ಹಾಕುವವನ ಪಾತ್ರ ಮಾಡಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದರು.

ಕೋವಿಡ್ ಸಮಯದಲ್ಲಿ ವಿನೋದ್‍ಗೆ ನಿರ್ದೇಶಕರು ಕಥೆ ಹೇಳಿದರಂತೆ. ‘ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80ರ ಕಾಲಘಟ್ಟದ ಕಥೆ. ಹ್ಯಾಂಗ್ ಮ್ಯಾನ್ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ ‘ಜಿದ್ದು’ ಹಾಗೂ ‘ಕರುಳಿನ ಕೂಗು’ ಚಿತ್ರಗಳು ನೆನಪಾದವು. ಚಿತ್ರದಲ್ಲಿ ಮೊದಲು ಮೃಗವಾಗಿರುತ್ತೇನೆ. ನನ್ನ ಜೀವನಕ್ಕೆ ಪಾರ್ವತಿ ಎಂಟ್ರಿ ಕೊಟ್ಟ ನಂತರ ಮನುಷ್ಯನಾಗುತ್ತೇನೆ. ನಂತರ ಕಾರಣಾಂತರಗಳಿಂದ ರಾಕ್ಷಸನಾಗುತ್ತೇನೆ. ಯಾಕೆ, ಏನು ಎಂದು ಗೊತ್ತಾಗಬೇಕಿದ್ದರೆ ಚಿತ್ರ ನೋಡಬೇಕು’ ಎಂದರು.

ಈ ಚಿತ್ರದಲ್ಲಿ ಸೋನಲ್‍, ಪಾರ್ವತಿ ಎಂಬ ಹಳ್ಳಿಹುಡುಗಿಯ ಪಾತ್ರ ಮಾಡಿದ್ದಾರಂತೆ. ‘ರಾಬರ್ಟ್’ ಚಿತ್ರದ ನಂತರ ತಾನು ಹಾಗೂ ವಿನೋದ್‍ ಜೊತೆಯಾಗಿ ನಟಿಸಿದ್ದೇವೆ ಎಂದು ಖುಷಿಪಟ್ಟರು. ಪ್ರದ್ಯೋತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago