ಮನರಂಜನೆ

ಮೇ 30 ಅಲ್ಲ, ಜೂನ್ 6 ರಂದು ಬಿಡುಗಡೆಯಾಗಲಿದೆ ‘ಮಾದೇವ’

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್‍ 06ರಂದು ಬಿಡುಗಡೆಯಾಗುತ್ತಿದೆ.

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ನಿರ್ದೇಶನದ ‘ಮಾದೇವ’ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಿಸಿದೆ.

ಈ ಸಂದರ್ಭದಲ್ಲಿ ಮತನಾಡಿದ ನಿರ್ದೇಶಕ ನವೀನ್‍ ರೆಡ್ಡಿ, ‘ಮಾದೇವ’ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ನೇಣಿಗೆ ಹಾಕುವವನ ಪಾತ್ರ ಮಾಡಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದರು.

ಕೋವಿಡ್ ಸಮಯದಲ್ಲಿ ವಿನೋದ್‍ಗೆ ನಿರ್ದೇಶಕರು ಕಥೆ ಹೇಳಿದರಂತೆ. ‘ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80ರ ಕಾಲಘಟ್ಟದ ಕಥೆ. ಹ್ಯಾಂಗ್ ಮ್ಯಾನ್ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ ‘ಜಿದ್ದು’ ಹಾಗೂ ‘ಕರುಳಿನ ಕೂಗು’ ಚಿತ್ರಗಳು ನೆನಪಾದವು. ಚಿತ್ರದಲ್ಲಿ ಮೊದಲು ಮೃಗವಾಗಿರುತ್ತೇನೆ. ನನ್ನ ಜೀವನಕ್ಕೆ ಪಾರ್ವತಿ ಎಂಟ್ರಿ ಕೊಟ್ಟ ನಂತರ ಮನುಷ್ಯನಾಗುತ್ತೇನೆ. ನಂತರ ಕಾರಣಾಂತರಗಳಿಂದ ರಾಕ್ಷಸನಾಗುತ್ತೇನೆ. ಯಾಕೆ, ಏನು ಎಂದು ಗೊತ್ತಾಗಬೇಕಿದ್ದರೆ ಚಿತ್ರ ನೋಡಬೇಕು’ ಎಂದರು.

ಈ ಚಿತ್ರದಲ್ಲಿ ಸೋನಲ್‍, ಪಾರ್ವತಿ ಎಂಬ ಹಳ್ಳಿಹುಡುಗಿಯ ಪಾತ್ರ ಮಾಡಿದ್ದಾರಂತೆ. ‘ರಾಬರ್ಟ್’ ಚಿತ್ರದ ನಂತರ ತಾನು ಹಾಗೂ ವಿನೋದ್‍ ಜೊತೆಯಾಗಿ ನಟಿಸಿದ್ದೇವೆ ಎಂದು ಖುಷಿಪಟ್ಟರು. ಪ್ರದ್ಯೋತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

23 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago