ಮನರಂಜನೆ

‘ಹರ್ಕ್ಯುಲಸ್’ ಆದ ವಿರಾಟ್‍; ಮಾಸ್‍ ಹೀರೋ ಆಗಿ ಬದಲಾಗಲು ಪ್ರಯತ್ನ

ಈ ಹಿಂದೆ ‘ಕಿಸ್‍’ ಚಿತ್ರದ ಮೂಲಕ ಹೀರೋ ಆದ ವಿರಾಟ್‍, ನಂತರ ‘ರಾಯಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅವರ ಮೂರನೆಯ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ವಿರಾಟ್‍ ಅಭಿನಯದ ಮೂರನೇ ಚಿತ್ರಕ್ಕೆ ‘ಹರ್ಕ್ಯುಲಸ್’ ಎಂಬ ಹೆಸರನ್ನು ಇಡಲಾಗಿದೆ.

ಈ ‘ಹರ್ಕ್ಯುಲಸ್’ ಚಿತ್ರಕ್ಕೆ ಭಗೀರಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. Aahana ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗುತ್ತಿದೆ. ವಿಶೇಷವೆಂದರೆ, Chat GPT ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕಗೆ ಈ ಚಿತ್ರ ಪಾತ್ರವಾಗಿದೆ. ಈ ಚಿತ್ರದ ಮೊದಲ ನೋಟ ಶನಿವಾರ ಬಿಡುಗಡೆಯಾಗಿದೆ. ವಿರಾಟ್‍ನ ಸುಮಾರು 200 ಅಡಿಯ ಬೃಹತ್ ಟೈಟಲ್ ಪೋಸ್ಟರನ್ನು ಬೆಂಗಳೂರಿನ ಕೋಣನಕುಂಟೆ ಬಳಿ ಇರುವ Superflex Forum Mall ಆವರಣದಲ್ಲಿ ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿ: ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದ ಪುನೀತ್‍; ಅಪ್ಪು‌ Fandom ಆ್ಯಪ್ ಅನಾವರಣ

‘ಹರ್ಕ್ಯುಲಸ್’ ಕುರಿತು ಮಾತನಾಡುವ ನಿರ್ದೇಶಕ ಭಗೀರಥ , ‘ಇದು ಒಬ್ಬ ಯೋಧನ ಹೆಸರು. ಇದು ಸೋಲನ್ನೇ ಕಾಣದ ಒಬ್ಬ ಯೋಧನ ಹೆಸರು. ನಮ್ಮ ಚಿತ್ರದಲ್ಲಿ ನಾಯಕನ ಪಾತ್ರ ಅದೇ ರೀತಿ ಇರುತ್ತದೆ. ಇದೊಂದು ಆಕ್ಷನ್ ಪ್ರೇಮಕಥೆ ಇರುವ ಸಿನಿಮಾ. ಈ ಚಿತ್ರದ ಮೂಲಕ ವಿರಾಟ್ ಅವರನ್ನ ಬೇರೆಯದೇ ರೀತಿಯಲ್ಲಿ ತೋರಿಸಬೇಕೆಂದು ಪ್ರಯತ್ನಿಸುತ್ತಿದ್ದೇವೆ. ನವೆಂಬರ್ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭಿಸಿ, ಮುಂದಿನ ವರ್ಷ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು.

ವಿರಾಟ್‍ ಮಾತನಾಡಿ, ‘ಹರ್ಕ್ಯುಲಸ್ ಇನ್ನೊಬ್ಬರಿಗೋಸ್ಕರ ಯುದ್ದ ಮಾಡುತ್ತಾನೆ. ಆತನಿಗೆ ಯಾವತ್ತೂ ಸೋಲಿಲ್ಲ. ಇಲ್ಲಿ ಆತನ ಹೋರಾಟ ಯಾರಿಗೋಸ್ಕರ ಅನ್ನೋದೇ ಚಿತ್ರದ ಕಥೆ. ಈ ಚಿತ್ರದಲ್ಲಿ ನನಗೆ ಮೂರು ಶೇಡ್ಗಳು ಇದೆ. ನನ್ನ ಹಿಂದಿನ ಚಿತ್ರಗಳಲ್ಲಿ ಲವ್ವರ್ ಬಾಯ್‍ ಪಾತ್ರದಲ್ಲಿ ಕಾಣಿಸಿಕೊಮಡಿದ್ದೆ. ಈ ಚಿತ್ರದಲ್ಲಿ ಆಕ್ಷನ್ ಕಮ್ ಲವ್ವರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರಕ್ಕಾಗಿ ಗೆಟಪ್ ಸೇರಿದಂತೆ ಬಹಳಷ್ಟು ಬದಲಾವಣೆ ಮಾಡಿಕೊಂಡಿದ್ದೇನೆ’ ಎಂದರು.

ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರ ಮಗ ಆದಿ ಹರಿ, ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಕಿಸ್‍’ ಚಿತ್ರದ ಹಾಡೊಂದನ್ನು ಅವರು ಸಂಯೋಜಿಸಿದ್ದರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ಸಂಗೀತ ನಿರ್ದೇಶಕರಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

8 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

8 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

11 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

12 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

13 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

13 hours ago