ಮನರಂಜನೆ

‘ಹರ್ಕ್ಯುಲಸ್’ ಆದ ವಿರಾಟ್‍; ಮಾಸ್‍ ಹೀರೋ ಆಗಿ ಬದಲಾಗಲು ಪ್ರಯತ್ನ

ಈ ಹಿಂದೆ ‘ಕಿಸ್‍’ ಚಿತ್ರದ ಮೂಲಕ ಹೀರೋ ಆದ ವಿರಾಟ್‍, ನಂತರ ‘ರಾಯಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅವರ ಮೂರನೆಯ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ವಿರಾಟ್‍ ಅಭಿನಯದ ಮೂರನೇ ಚಿತ್ರಕ್ಕೆ ‘ಹರ್ಕ್ಯುಲಸ್’ ಎಂಬ ಹೆಸರನ್ನು ಇಡಲಾಗಿದೆ.

ಈ ‘ಹರ್ಕ್ಯುಲಸ್’ ಚಿತ್ರಕ್ಕೆ ಭಗೀರಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. Aahana ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗುತ್ತಿದೆ. ವಿಶೇಷವೆಂದರೆ, Chat GPT ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕಗೆ ಈ ಚಿತ್ರ ಪಾತ್ರವಾಗಿದೆ. ಈ ಚಿತ್ರದ ಮೊದಲ ನೋಟ ಶನಿವಾರ ಬಿಡುಗಡೆಯಾಗಿದೆ. ವಿರಾಟ್‍ನ ಸುಮಾರು 200 ಅಡಿಯ ಬೃಹತ್ ಟೈಟಲ್ ಪೋಸ್ಟರನ್ನು ಬೆಂಗಳೂರಿನ ಕೋಣನಕುಂಟೆ ಬಳಿ ಇರುವ Superflex Forum Mall ಆವರಣದಲ್ಲಿ ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿ: ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದ ಪುನೀತ್‍; ಅಪ್ಪು‌ Fandom ಆ್ಯಪ್ ಅನಾವರಣ

‘ಹರ್ಕ್ಯುಲಸ್’ ಕುರಿತು ಮಾತನಾಡುವ ನಿರ್ದೇಶಕ ಭಗೀರಥ , ‘ಇದು ಒಬ್ಬ ಯೋಧನ ಹೆಸರು. ಇದು ಸೋಲನ್ನೇ ಕಾಣದ ಒಬ್ಬ ಯೋಧನ ಹೆಸರು. ನಮ್ಮ ಚಿತ್ರದಲ್ಲಿ ನಾಯಕನ ಪಾತ್ರ ಅದೇ ರೀತಿ ಇರುತ್ತದೆ. ಇದೊಂದು ಆಕ್ಷನ್ ಪ್ರೇಮಕಥೆ ಇರುವ ಸಿನಿಮಾ. ಈ ಚಿತ್ರದ ಮೂಲಕ ವಿರಾಟ್ ಅವರನ್ನ ಬೇರೆಯದೇ ರೀತಿಯಲ್ಲಿ ತೋರಿಸಬೇಕೆಂದು ಪ್ರಯತ್ನಿಸುತ್ತಿದ್ದೇವೆ. ನವೆಂಬರ್ ತಿಂಗಳಲ್ಲಿ ಚಿತ್ರದ ಚಿತ್ರೀಕರಣ ಆರಂಭಿಸಿ, ಮುಂದಿನ ವರ್ಷ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದರು.

ವಿರಾಟ್‍ ಮಾತನಾಡಿ, ‘ಹರ್ಕ್ಯುಲಸ್ ಇನ್ನೊಬ್ಬರಿಗೋಸ್ಕರ ಯುದ್ದ ಮಾಡುತ್ತಾನೆ. ಆತನಿಗೆ ಯಾವತ್ತೂ ಸೋಲಿಲ್ಲ. ಇಲ್ಲಿ ಆತನ ಹೋರಾಟ ಯಾರಿಗೋಸ್ಕರ ಅನ್ನೋದೇ ಚಿತ್ರದ ಕಥೆ. ಈ ಚಿತ್ರದಲ್ಲಿ ನನಗೆ ಮೂರು ಶೇಡ್ಗಳು ಇದೆ. ನನ್ನ ಹಿಂದಿನ ಚಿತ್ರಗಳಲ್ಲಿ ಲವ್ವರ್ ಬಾಯ್‍ ಪಾತ್ರದಲ್ಲಿ ಕಾಣಿಸಿಕೊಮಡಿದ್ದೆ. ಈ ಚಿತ್ರದಲ್ಲಿ ಆಕ್ಷನ್ ಕಮ್ ಲವ್ವರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರಕ್ಕಾಗಿ ಗೆಟಪ್ ಸೇರಿದಂತೆ ಬಹಳಷ್ಟು ಬದಲಾವಣೆ ಮಾಡಿಕೊಂಡಿದ್ದೇನೆ’ ಎಂದರು.

ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರ ಮಗ ಆದಿ ಹರಿ, ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಕಿಸ್‍’ ಚಿತ್ರದ ಹಾಡೊಂದನ್ನು ಅವರು ಸಂಯೋಜಿಸಿದ್ದರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ಸಂಗೀತ ನಿರ್ದೇಶಕರಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago