ಮನರಂಜನೆ

ವಿಷ್ಣು ಸಮಾಧಿ ತೆರವು | ಕಿಚ್ಚ ಸುದೀಪ್‌ ಭಾವುಕ ಪೋಸ್ಟ್‌…

ಬೆಂಗಳೂರು : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್‌ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್‌ ಹಾಗೂ ಬರವಣಿಗೆ ಪೋಸ್ಟ್‌ ಮಾಡಿರುವ ಅವರು, ಸಮಾಧಿ ತೆರವು ಮಾಡಿರುವುದು ಹೇಡಿತನದ ಕೃತ್ಯ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ ಎಂದು ಬೇಸರಿಸಿದ್ದಾರೆ.

ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ.

ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ ಎಂದಿದ್ದಾರೆ.

ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ.

ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ.

ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಸುದೀರ್ಘ ಬರವಣಿಗೆ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

8 seconds ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

10 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

4 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

4 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

4 hours ago