ಮನರಂಜನೆ

ವಿಷ್ಣುವರ್ಧನ್‍ ಪುಣ್ಯಭೂಮಿ ನೆಲಸಮ: ಕೊನೆಗೂ ಬಾಯಿಬಿಟ್ಟ ಸ್ಟಾರ್ ನಟರು

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ ಅಭಿಮಾನ್‍ ಸ್ಟುಡಿಯೋ ಬಳಿ ಬಂಧನಕ್ಕೂ ಒಳಗಾದರು. ಆದರೆ, ಇಷ್ಟೆಲ್ಲಾ ಆದರೂ ಚಿತ್ರರಂಗದವರು, ಪ್ರಮುಖವಾಗಿ ಯಾವೊಬ್ಬ ಸ್ಟಾರ್‍ ನಟರು ಸಹ ಈ ವಿಷಯವಾಗಿ ಮಾತನಾಡಿರಲಿಲ್ಲ. ಇದೀಗ ಕ್ರಮೇಣ ಒಬ್ಬೊಬ್ಬರೇ ಬಾಯಿ ಬಿಡುತ್ತಿದ್ದಾರೆ.

ಈ ವಿಚಾರವಾಗಿ ಸುದೀಪ್‍, ಶನಿವಾರ ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಆ ನಂತರ ವೀಡಿಯೋ ಸಹ ಹಂಚಿಕೊಂಡಿದ್ದರು. ಸ್ಮಾರಕ ಮರುಸ್ಥಾಪನೆ ಮಾಡುವ ವಿಷಯದಲ್ಲಿ ತಮ್ಮ ಶಕ್ತಿಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಸುದೀಪ್‍ ಹೇಳಿಕೆ ಹೊರಬರುತ್ತಿದ್ದಂತೆಯೇ, ರಿಷಭ್‍ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಒಬ್ಬೊಬ್ಬರೇ ಈ ವಿಷಯವಾಗಿ ಮಾತನಾಡಿದ್ದಾರೆ. ಚಿತ್ರರಂಗದವರು ಈ ವಿಷಯವಾಗಿ ಕೊನೆಗೂ ಮಾತನಾಡಿದರಲ್ಲ ಎನ್ನುವುದು ಒಂದು ಕಡೆಯಾದರೆ, ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪುಣ್ಯಭೂಮಿಯನ್ನು ಉಳಿಸಿಕೊಳ್ಳುವುದಕ್ಕೆ ಅಭಿಮಾನಿಗಳು ಕೆಲವು ವರ್ಷಗಳಿಂದ ಹೋರಾಟ ಮಾಡಿದ್ದು, ಆ ಸಂದರ್ಭದಲ್ಲಿ ಯಾರೊಬ್ಬರೂ ಬೆಂಬಲ ನೀಡದೆ, ಈಗ ಮಾತನಾಡುತ್ತಿರುವ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ.

ಈ ಕುರಿತು ಪೋಸ್ಟ್ ಮಾಡಿರುವ ರಿಷಭ್‍ ಶೆಟ್ಟಿ, ‘ಡಾ. ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರದಲ್ಲಿ ನಡೆದಿರುವುದು ಖಂಡನೀಯ. ಅವರನ್ನು ಹೃದಯಪೂರ್ವಕವಾಗಿ ಆರಾಧಿಸುವ ಪ್ರತಿಯೊಬ್ಬ ಅಭಿಮಾನಿಗೂ ಇದು ಅತೀವ ನೋವುಂಟು ಮಾಡಿದೆ. ನಾಡಿನ ಮೇರು ನಟರೊಬ್ಬರ ವಿಚಾರದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಅವರ ವ್ಯಕ್ತಿತ್ವ ಮತ್ತು ಕಲಾಸೇವೆಗೆ ಅಗೌರವ ತಂದಂತಾಗಿದೆ’ ಎಂದು ಹೇಳಿದ್ದಾರೆ.

ಒಬ್ಬ ಸಾಧಕನಿಗೆ ಈ ಅವಮಾನ ಸರಿಯಲ್ಲ ಎಂದಿರುವ ಧ್ರುವ ಸರ್ಜಾ, ‘ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ… ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ ಇದೆಲ್ಲದಕ್ಕೂ ಉತ್ತರ ನಾನು ಒಬ್ಬ ಕನ್ನಡಿಗನಾಗಿ ಒಬ್ಬ ಕಲಾವಿದನಾಗಿ ಈ ಒಂದು ಸಂದರ್ಭದಲ್ಲಿ ನಾನು ವಿಷ್ಣು ಸರ್ ಅಭಿಮಾನಿಗಳ ಜೊತೆ ಪ್ರಾಮಾಣಿಕವಾಗಿ ಇದ್ದೇನೆ ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

3 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

3 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

3 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

3 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

3 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago