Vrutha
ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಯೋಗೇಶ್ ಗೌಡ ಕಥೆ, ಶಂಕರ ರಾಮನ್ ಅವರ ಸಂಭಾಷಣೆ ಇದೆ. ಇನ್ನು, ಲಿಖಿತ್ ಕುಮಾರ್ ಈ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.
‘ವೃತ್ತ’ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್. ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ಲಿಖಿಲ್ ಕುಮಾರ್. ‘ಈ ಚಿತ್ರ ಒಂದು ರಾತ್ರಿ ನಡೆಯುವ ಘಟನಾವಳಿಗಳನ್ನು ಒಳಗೊಂಡಿದೆ. ಇದು ಭಾವಪೂರ್ಣ ರೈಡ್ ಎನ್ನಬಹುದು. ಸಿದ್ದಾರ್ಥ್ ಎಂಬ ಪಾತ್ರದ ಸುತ್ತ ನಡೆಯುವ ಕಥೆ ಇದರಲ್ಲಿದ್ದು, ಸಿದ್ದಾರ್ಥ್ಗೆ ಆತನ ಮಸ್ಥಿತಿಯೇ ಶತ್ರು. ಒಂದು ರಾತ್ರಿ, ಒಂದು ಕರೆ ಹಾಗೂ ನಾಯಕ ದಾರಿಯಲ್ಲಿ ತೆಗೆದುಕೊಳ್ಳಬಹುದಾದ ರಾಂಗ್ ಟರ್ನ್ನಿಂದ ಏನೆಲ್ಲಾ ಸಂಭವಿಸಲಿದೆ ಎಂಬುವುದು ಚಿತ್ರದ ತಿರುಳು. ಮೊಹಿಯುದ್ದೀನ್ ಇಲ್ಲಿ ಸಿದ್ದಾರ್ಥ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಯಣ್ಣ ಫಿಲ್ಮ್ಸ್ ಚಿತ್ರದ ವಿತರಣೆ ಮಾಡುತ್ತಿದೆ’ ಎಂದರು.
ಮೂಲತಃ ಸಂಕಲನಕಾರರಾಗಿರುವ ಲಿಖಿತ್, ಎರಡು ಕಿರುಚಿತ್ರಗಳನ್ನೂ ನಿರ್ದೇಶಿಸಿದ್ದರಂತೆ. ‘ಒಂದು ಚಾಲೆಂಜಿಂಗ್ ಕಥೆ ಇಟ್ಟುಕೊಂಡು ಕಥೆ ಮಾಡಬೇಕೆಂಬ ಆಸೆ ಇತ್ತು. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಹಾಗೂ ‘ಅದು ಯಾವ ಮಾಯೆಯೋ…’ ಎಂಬ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಚಿತ್ರವನ್ನು ವೀಕ್ಷಿಸಿದ ನಟ ನೀನಾಸಂ ಸತೀಶ್ ಅವರು ಚಿತ್ರದ ಕಂಟೆಂಟ್ ಮೆಚ್ಚಿ ಚಿತ್ರವನ್ನು ಅರ್ಪಿಸುತ್ತಿದ್ದಾರೆ’ ಎಂದರು.
‘ವೃತ್ತ’ ಚಿತ್ರದಲ್ಲಿ ಮೊಹಿಯುದ್ದೀನ್, ಜೊತೆಗೆ ಹರಿಣಿ ಸುಂದರ ರಾಜನ್, ಚೈತ್ರಾ ಆಚಾರ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಒಂದೇ ಒಂದು ಹಾಡಿದ್ದು ಆಂಟೋನಿ ಹಾಗೂ ಹರಿ ಕೃಷಾಂತ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಗೌತಮ್ ಕೃಷ್ಣ ಅವರ ಛಾಯಗ್ರಹಣ ಈ ಚಿತ್ರಕ್ಕಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…