ಮನರಂಜನೆ

ರಾಂಗ್‍ ಟರ್ನ್‍ನಿಂದ ಆಗಬಹುದಾದ ಅನಾಹುತದ ಸುತ್ತ ‘ವೃತ್ತ’

ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಯೋಗೇಶ್‌ ಗೌಡ ಕಥೆ, ಶಂಕರ ರಾಮನ್ ಅವರ ಸಂಭಾಷಣೆ ಇದೆ. ಇನ್ನು, ಲಿಖಿತ್‌ ಕುಮಾರ್ ಈ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

‘ವೃತ್ತ’ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್.‌ ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ಲಿಖಿಲ್‌ ಕುಮಾರ್.‌ ‘ಈ ಚಿತ್ರ ಒಂದು ರಾತ್ರಿ ನಡೆಯುವ ಘಟನಾವಳಿಗಳನ್ನು ಒಳಗೊಂಡಿದೆ. ಇದು ಭಾವಪೂರ್ಣ ರೈಡ್‌ ಎನ್ನಬಹುದು. ಸಿದ್ದಾರ್ಥ್‌ ಎಂಬ ಪಾತ್ರದ ಸುತ್ತ ನಡೆಯುವ ಕಥೆ ಇದರಲ್ಲಿದ್ದು, ಸಿದ್ದಾರ್ಥ್‌ಗೆ ಆತನ ಮಸ್ಥಿತಿಯೇ ಶತ್ರು. ಒಂದು ರಾತ್ರಿ, ಒಂದು ಕರೆ ಹಾಗೂ ನಾಯಕ ದಾರಿಯಲ್ಲಿ ತೆಗೆದುಕೊಳ್ಳಬಹುದಾದ ರಾಂಗ್‌ ಟರ್ನ್‌ನಿಂದ ಏನೆಲ್ಲಾ ಸಂಭವಿಸಲಿದೆ ಎಂಬುವುದು ಚಿತ್ರದ ತಿರುಳು. ಮೊಹಿಯುದ್ದೀನ್‌ ಇಲ್ಲಿ ಸಿದ್ದಾರ್ಥ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಯಣ್ಣ ಫಿಲ್ಮ್ಸ್ ಚಿತ್ರದ ವಿತರಣೆ ಮಾಡುತ್ತಿದೆ’ ಎಂದರು.

ಮೂಲತಃ ಸಂಕಲನಕಾರರಾಗಿರುವ ಲಿಖಿತ್‍, ಎರಡು ಕಿರುಚಿತ್ರಗಳನ್ನೂ ನಿರ್ದೇಶಿಸಿದ್ದರಂತೆ. ‘ಒಂದು ಚಾಲೆಂಜಿಂಗ್‌ ಕಥೆ ಇಟ್ಟುಕೊಂಡು ಕಥೆ ಮಾಡಬೇಕೆಂಬ ಆಸೆ ಇತ್ತು. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಹಾಗೂ ‘ಅದು ಯಾವ ಮಾಯೆಯೋ…’ ಎಂಬ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಚಿತ್ರವನ್ನು ವೀಕ್ಷಿಸಿದ ನಟ ನೀನಾಸಂ ಸತೀಶ್ ಅವರು ಚಿತ್ರದ ಕಂಟೆಂಟ್ ಮೆಚ್ಚಿ ಚಿತ್ರವನ್ನು ಅರ್ಪಿಸುತ್ತಿದ್ದಾರೆ’ ಎಂದರು.

‘ವೃತ್ತ’ ಚಿತ್ರದಲ್ಲಿ ಮೊಹಿಯುದ್ದೀನ್‍, ಜೊತೆಗೆ ಹರಿಣಿ ಸುಂದರ ರಾಜನ್, ಚೈತ್ರಾ ಆಚಾರ್‍ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಒಂದೇ ಒಂದು ಹಾಡಿದ್ದು ಆಂಟೋನಿ ಹಾಗೂ ಹರಿ ಕೃಷಾಂತ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಗೌತಮ್ ಕೃಷ್ಣ ಅವರ ಛಾಯಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago