ಮನರಂಜನೆ

ರಾಂಗ್‍ ಟರ್ನ್‍ನಿಂದ ಆಗಬಹುದಾದ ಅನಾಹುತದ ಸುತ್ತ ‘ವೃತ್ತ’

ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಯೋಗೇಶ್‌ ಗೌಡ ಕಥೆ, ಶಂಕರ ರಾಮನ್ ಅವರ ಸಂಭಾಷಣೆ ಇದೆ. ಇನ್ನು, ಲಿಖಿತ್‌ ಕುಮಾರ್ ಈ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

‘ವೃತ್ತ’ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್.‌ ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ಲಿಖಿಲ್‌ ಕುಮಾರ್.‌ ‘ಈ ಚಿತ್ರ ಒಂದು ರಾತ್ರಿ ನಡೆಯುವ ಘಟನಾವಳಿಗಳನ್ನು ಒಳಗೊಂಡಿದೆ. ಇದು ಭಾವಪೂರ್ಣ ರೈಡ್‌ ಎನ್ನಬಹುದು. ಸಿದ್ದಾರ್ಥ್‌ ಎಂಬ ಪಾತ್ರದ ಸುತ್ತ ನಡೆಯುವ ಕಥೆ ಇದರಲ್ಲಿದ್ದು, ಸಿದ್ದಾರ್ಥ್‌ಗೆ ಆತನ ಮಸ್ಥಿತಿಯೇ ಶತ್ರು. ಒಂದು ರಾತ್ರಿ, ಒಂದು ಕರೆ ಹಾಗೂ ನಾಯಕ ದಾರಿಯಲ್ಲಿ ತೆಗೆದುಕೊಳ್ಳಬಹುದಾದ ರಾಂಗ್‌ ಟರ್ನ್‌ನಿಂದ ಏನೆಲ್ಲಾ ಸಂಭವಿಸಲಿದೆ ಎಂಬುವುದು ಚಿತ್ರದ ತಿರುಳು. ಮೊಹಿಯುದ್ದೀನ್‌ ಇಲ್ಲಿ ಸಿದ್ದಾರ್ಥ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಯಣ್ಣ ಫಿಲ್ಮ್ಸ್ ಚಿತ್ರದ ವಿತರಣೆ ಮಾಡುತ್ತಿದೆ’ ಎಂದರು.

ಮೂಲತಃ ಸಂಕಲನಕಾರರಾಗಿರುವ ಲಿಖಿತ್‍, ಎರಡು ಕಿರುಚಿತ್ರಗಳನ್ನೂ ನಿರ್ದೇಶಿಸಿದ್ದರಂತೆ. ‘ಒಂದು ಚಾಲೆಂಜಿಂಗ್‌ ಕಥೆ ಇಟ್ಟುಕೊಂಡು ಕಥೆ ಮಾಡಬೇಕೆಂಬ ಆಸೆ ಇತ್ತು. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಹಾಗೂ ‘ಅದು ಯಾವ ಮಾಯೆಯೋ…’ ಎಂಬ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಚಿತ್ರವನ್ನು ವೀಕ್ಷಿಸಿದ ನಟ ನೀನಾಸಂ ಸತೀಶ್ ಅವರು ಚಿತ್ರದ ಕಂಟೆಂಟ್ ಮೆಚ್ಚಿ ಚಿತ್ರವನ್ನು ಅರ್ಪಿಸುತ್ತಿದ್ದಾರೆ’ ಎಂದರು.

‘ವೃತ್ತ’ ಚಿತ್ರದಲ್ಲಿ ಮೊಹಿಯುದ್ದೀನ್‍, ಜೊತೆಗೆ ಹರಿಣಿ ಸುಂದರ ರಾಜನ್, ಚೈತ್ರಾ ಆಚಾರ್‍ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಒಂದೇ ಒಂದು ಹಾಡಿದ್ದು ಆಂಟೋನಿ ಹಾಗೂ ಹರಿ ಕೃಷಾಂತ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಗೌತಮ್ ಕೃಷ್ಣ ಅವರ ಛಾಯಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago