ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ರಣಹದ್ದು ಸಂರಕ್ಷಣಾ ಟ್ರಸ್ಟ್ ಡಿಎಫ್ಒಗೆ ದೂರು ನೀಡಿದೆ.
ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ಸುದೀಪ್ ಈ ಪದ ಬಳಕೆ ಮಾಡಿದ್ದು ತಪ್ಪು. ಈ ಬಗ್ಗೆ ಪ್ರೇಕ್ಷಕರಿಗೆ ನಟ ಸುದೀಪ್ ಕ್ಲಾರಿಟಿ ಕೊಡಬೇಕು. ಸರಿಯಾದ ವಿವರಣೆ ಕೊಡಲಿ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಆಗ್ರಹಿಸಿದೆ.
ರಣಹದ್ದು ಯಾವಾಗಲೂ ಜೀವಂತ ಪ್ರಾಣಿಗಳನ್ನು ಬೇಟೆಯಾಡಲ್ಲ. ಸತ್ತ ಪ್ರಾಣಿಗಳನ್ನು ತಿನ್ನುತ್ತದೆ. ಈ ಮೂಲಕ ಪರಿಸರವನ್ನು ಕ್ಲೀನ್ ಮಾಡುವ ಕೆಲಸ ಮಾಡುತ್ತದೆ. ಆದರೆ ಸುದೀಪ್ ಅವರು ಬಿಗ್ಬಾಸ್ ಶೋನಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಹಿಡಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಹಾಗೆ ಹದ್ದು ಆ ತರಹದ ಪಕ್ಷಿಯಲ್ಲ. ಸುದೀಪ್ ವೀಕ್ಷಕರಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…