ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ರಣಹದ್ದು ಸಂರಕ್ಷಣಾ ಟ್ರಸ್ಟ್ ಡಿಎಫ್ಒಗೆ ದೂರು ನೀಡಿದೆ.
ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ಸುದೀಪ್ ಈ ಪದ ಬಳಕೆ ಮಾಡಿದ್ದು ತಪ್ಪು. ಈ ಬಗ್ಗೆ ಪ್ರೇಕ್ಷಕರಿಗೆ ನಟ ಸುದೀಪ್ ಕ್ಲಾರಿಟಿ ಕೊಡಬೇಕು. ಸರಿಯಾದ ವಿವರಣೆ ಕೊಡಲಿ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಆಗ್ರಹಿಸಿದೆ.
ರಣಹದ್ದು ಯಾವಾಗಲೂ ಜೀವಂತ ಪ್ರಾಣಿಗಳನ್ನು ಬೇಟೆಯಾಡಲ್ಲ. ಸತ್ತ ಪ್ರಾಣಿಗಳನ್ನು ತಿನ್ನುತ್ತದೆ. ಈ ಮೂಲಕ ಪರಿಸರವನ್ನು ಕ್ಲೀನ್ ಮಾಡುವ ಕೆಲಸ ಮಾಡುತ್ತದೆ. ಆದರೆ ಸುದೀಪ್ ಅವರು ಬಿಗ್ಬಾಸ್ ಶೋನಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಹಿಡಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಹಾಗೆ ಹದ್ದು ಆ ತರಹದ ಪಕ್ಷಿಯಲ್ಲ. ಸುದೀಪ್ ವೀಕ್ಷಕರಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…