ಮನರಂಜನೆ

ಜ್ಯೂನಿಯರ್ NTR ಹುಟ್ಟುಹಬ್ಬಕ್ಕೆ ‘ವಾರ್ 2’ ಚಿತ್ರ ತಂಡದ ಉಡುಗೊರೆ

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್‍ ರೋಶನ್‍ ಜೊತೆಗೆ ‘ವಾರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಹೃತಿಕ್‍ ರೋಶನ್‍, ರಾ ಏಜೆಂಟ್‍ ಕಬೀರ್ ಆಗಿ ತಮ್ಮ ಪಾತ್ರವನ್ನು ಮುಂದುವರೆಸಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ. ಇನ್ನು, ಅವರೆದುರು ವಿಲನ್‍ ಆಗಿ ಜ್ಯೂನಿಯರ್ NTR ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ವಾರ್ 2’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಚಿತ್ರವು ಆಗಸ್ಟ್.14ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಮಂಗಳವಾರ ಜ್ಯೂನಿಯರ್ NTR ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ವಾರ್ 2’ ಚಿತ್ರದ ಟೀಸರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.

‘ನಿನಗೆ ನನ್ನ ಬಗ್ಗೆ ಗೊತ್ತಿಲ್ಲ. ಆದರೆ, ಸದ್ಯದಲ್ಲೇ ಗೊತ್ತಾಗಲಿದೆ. ಗೆಟ್‍ ರೆಡಿ ಫಾರ್ ಮೋರ್…’ ಎಂದು ಜ್ಯೂನಿಯರ್ NTR ಸಂಭಾಷಣೆ ಹೇಳಿಕೊಂಡು ಎಂಟ್ರಿ ಕೊಡುತ್ತಾರೆ. ಅವರ ಮತ್ತು ಹೃತಿಕ್‍ ರೋಶನ್‍ ಅಭಿನಯದ ಸಾಹಸಮಯ ದೃಶ್ಯಗಳು ಸಾಕಷ್ಟು ಕುತೂಹಲ ಮೂಡಿಸುತ್ತವೆ. ಇದೊಂದು ಸ್ಪೈ ಚಿತ್ರವಾಗಿದ್ದು, ಯಶ್‍ರಾಜ್‍ ಫಿಲಂಸ್‍ ಸಂಸ್ಥೆಯು ಈ ಹಿಂದೆ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದಾರೆ.

‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

3 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

6 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

6 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

6 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

7 hours ago