ಮನರಂಜನೆ

ಜ್ಯೂನಿಯರ್ NTR ಹುಟ್ಟುಹಬ್ಬಕ್ಕೆ ‘ವಾರ್ 2’ ಚಿತ್ರ ತಂಡದ ಉಡುಗೊರೆ

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್‍ ರೋಶನ್‍ ಜೊತೆಗೆ ‘ವಾರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಹೃತಿಕ್‍ ರೋಶನ್‍, ರಾ ಏಜೆಂಟ್‍ ಕಬೀರ್ ಆಗಿ ತಮ್ಮ ಪಾತ್ರವನ್ನು ಮುಂದುವರೆಸಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ. ಇನ್ನು, ಅವರೆದುರು ವಿಲನ್‍ ಆಗಿ ಜ್ಯೂನಿಯರ್ NTR ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ವಾರ್ 2’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಚಿತ್ರವು ಆಗಸ್ಟ್.14ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಮಂಗಳವಾರ ಜ್ಯೂನಿಯರ್ NTR ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ವಾರ್ 2’ ಚಿತ್ರದ ಟೀಸರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.

‘ನಿನಗೆ ನನ್ನ ಬಗ್ಗೆ ಗೊತ್ತಿಲ್ಲ. ಆದರೆ, ಸದ್ಯದಲ್ಲೇ ಗೊತ್ತಾಗಲಿದೆ. ಗೆಟ್‍ ರೆಡಿ ಫಾರ್ ಮೋರ್…’ ಎಂದು ಜ್ಯೂನಿಯರ್ NTR ಸಂಭಾಷಣೆ ಹೇಳಿಕೊಂಡು ಎಂಟ್ರಿ ಕೊಡುತ್ತಾರೆ. ಅವರ ಮತ್ತು ಹೃತಿಕ್‍ ರೋಶನ್‍ ಅಭಿನಯದ ಸಾಹಸಮಯ ದೃಶ್ಯಗಳು ಸಾಕಷ್ಟು ಕುತೂಹಲ ಮೂಡಿಸುತ್ತವೆ. ಇದೊಂದು ಸ್ಪೈ ಚಿತ್ರವಾಗಿದ್ದು, ಯಶ್‍ರಾಜ್‍ ಫಿಲಂಸ್‍ ಸಂಸ್ಥೆಯು ಈ ಹಿಂದೆ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದಾರೆ.

‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

37 mins ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

54 mins ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

1 hour ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

1 hour ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

2 hours ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

3 hours ago