ಮನರಂಜನೆ

ಜ್ಯೂನಿಯರ್ NTR ಹುಟ್ಟುಹಬ್ಬಕ್ಕೆ ‘ವಾರ್ 2’ ಚಿತ್ರ ತಂಡದ ಉಡುಗೊರೆ

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್‍ ರೋಶನ್‍ ಜೊತೆಗೆ ‘ವಾರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಹೃತಿಕ್‍ ರೋಶನ್‍, ರಾ ಏಜೆಂಟ್‍ ಕಬೀರ್ ಆಗಿ ತಮ್ಮ ಪಾತ್ರವನ್ನು ಮುಂದುವರೆಸಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ. ಇನ್ನು, ಅವರೆದುರು ವಿಲನ್‍ ಆಗಿ ಜ್ಯೂನಿಯರ್ NTR ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ವಾರ್ 2’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಚಿತ್ರವು ಆಗಸ್ಟ್.14ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಮಂಗಳವಾರ ಜ್ಯೂನಿಯರ್ NTR ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ವಾರ್ 2’ ಚಿತ್ರದ ಟೀಸರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.

‘ನಿನಗೆ ನನ್ನ ಬಗ್ಗೆ ಗೊತ್ತಿಲ್ಲ. ಆದರೆ, ಸದ್ಯದಲ್ಲೇ ಗೊತ್ತಾಗಲಿದೆ. ಗೆಟ್‍ ರೆಡಿ ಫಾರ್ ಮೋರ್…’ ಎಂದು ಜ್ಯೂನಿಯರ್ NTR ಸಂಭಾಷಣೆ ಹೇಳಿಕೊಂಡು ಎಂಟ್ರಿ ಕೊಡುತ್ತಾರೆ. ಅವರ ಮತ್ತು ಹೃತಿಕ್‍ ರೋಶನ್‍ ಅಭಿನಯದ ಸಾಹಸಮಯ ದೃಶ್ಯಗಳು ಸಾಕಷ್ಟು ಕುತೂಹಲ ಮೂಡಿಸುತ್ತವೆ. ಇದೊಂದು ಸ್ಪೈ ಚಿತ್ರವಾಗಿದ್ದು, ಯಶ್‍ರಾಜ್‍ ಫಿಲಂಸ್‍ ಸಂಸ್ಥೆಯು ಈ ಹಿಂದೆ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದಾರೆ.

‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

13 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

14 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago