ಮನರಂಜನೆ

ಜ್ಯೂನಿಯರ್ NTR ಹುಟ್ಟುಹಬ್ಬಕ್ಕೆ ‘ವಾರ್ 2’ ಚಿತ್ರ ತಂಡದ ಉಡುಗೊರೆ

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್‍ ರೋಶನ್‍ ಜೊತೆಗೆ ‘ವಾರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

‘ವಾರ್ 2’ ಚಿತ್ರವು ಯಶ್‍ ರಾಜ್‍ ಫಿಲಂಸ್‍ ಸ್ಪೈ ಯೂನಿವರ್ಸ್‍ನ ಹೊಸ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಹೃತಿಕ್‍ ರೋಶನ್‍, ರಾ ಏಜೆಂಟ್‍ ಕಬೀರ್ ಆಗಿ ತಮ್ಮ ಪಾತ್ರವನ್ನು ಮುಂದುವರೆಸಿದ್ದಾರೆ. ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ. ಇನ್ನು, ಅವರೆದುರು ವಿಲನ್‍ ಆಗಿ ಜ್ಯೂನಿಯರ್ NTR ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

‘ವಾರ್ 2’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಚಿತ್ರವು ಆಗಸ್ಟ್.14ರಂದು ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಮಂಗಳವಾರ ಜ್ಯೂನಿಯರ್ NTR ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ವಾರ್ 2’ ಚಿತ್ರದ ಟೀಸರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ.

‘ನಿನಗೆ ನನ್ನ ಬಗ್ಗೆ ಗೊತ್ತಿಲ್ಲ. ಆದರೆ, ಸದ್ಯದಲ್ಲೇ ಗೊತ್ತಾಗಲಿದೆ. ಗೆಟ್‍ ರೆಡಿ ಫಾರ್ ಮೋರ್…’ ಎಂದು ಜ್ಯೂನಿಯರ್ NTR ಸಂಭಾಷಣೆ ಹೇಳಿಕೊಂಡು ಎಂಟ್ರಿ ಕೊಡುತ್ತಾರೆ. ಅವರ ಮತ್ತು ಹೃತಿಕ್‍ ರೋಶನ್‍ ಅಭಿನಯದ ಸಾಹಸಮಯ ದೃಶ್ಯಗಳು ಸಾಕಷ್ಟು ಕುತೂಹಲ ಮೂಡಿಸುತ್ತವೆ. ಇದೊಂದು ಸ್ಪೈ ಚಿತ್ರವಾಗಿದ್ದು, ಯಶ್‍ರಾಜ್‍ ಫಿಲಂಸ್‍ ಸಂಸ್ಥೆಯು ಈ ಹಿಂದೆ ‘ಟೈಗರ್’, ‘ಪಠಾಣ್‍’, ‘ವಾರ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದಾರೆ.

‘ವಾರ್ 2’ ಚಿತ್ರವನ್ನು ಅಯಾನ್ ‍ಮುಖರ್ಜಿ ನಿರ್ದೇಶನ ಮಾಡಿದ್ದು, ಆದಿತ್ಯ ಜೋಪ್ರಾ ನಿರ್ಮಿಸಿದ್ದಾರೆ. ಜೊತೆಗೆ ಕಥೆಯನ್ನು ಸಹ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

1 hour ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

2 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

6 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

6 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

21 hours ago