Categories: ಮನರಂಜನೆ

‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಕೇವಲ 99 ರೂ.ಗೆ ನೋಡಿ …

ಅನೀಶ್ ತೇಜೇಶ್ವರ್ ಅಭಿನಯದ ʼಆರಾಮ್ ಅರವಿಂದಸ್ವಮಿʼ ಚಿತ್ರವು ನವೆಂಬರ್ ೨೨ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಲು ಪ್ರೇಕ್ಷಕರನ್ನು ಸೆಳೆಯುವುದಕ್ಕೆ ಚಿತ್ರತಂಡದವರು ಒಂದು ಆಫರ್ ಇಟ್ಟಿದ್ದಾರೆ. ಚಿತ್ರದ ಟಿಕೆಟ್ ದರವನ್ನು ಇಳಿಸಲಾಗಿದ್ದು, ಬಿಡುಗಡೆಯಾದ ಮೊದಲ ಮೂರು ದಿನಗಳ ಕಾಲ, ಟಿಕೆಟ್ ದರ ಕೇವಲ ೯೯ ರೂ. ಇರುತ್ತದೆ. ಈ ಆಫರ್ ಕೇವಲ ಮೂರು ದಿನಗಳ ಕಾಲ ಮಾತ್ರ. ನ.೨೨ರಿಂದ ೨೪ರವರೆಗೂ ಟಿಕೆಟ್ ದರ ೯೯ ರೂ.ಗಳಿದ್ದು, ಸೋಮವಾರದಿಂದ (ನ.೨೫) ಬೆಲೆ ಮಾಮೂಲಿಯಂತಿರಲಿದೆ.

ಇತ್ತೀಚೆಗೆ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ಈ ಕಾರ್ಯಕ್ರಮಕ್ಕೆ ಶ್ರೀಮುರಳಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಬದಲ್ಲಿ ಮಾತನಾಡಿದ ಶ್ರೀಮುರಳಿ, ʼನನಗೆ ಟೈಟಲ್ ತುಂಬಾ ಇಷ್ಟವಾಯಿತು. ಯಶಸ್ಸು ಸಿಕ್ಕ ಮೇಲೆ ಸೋಲು ಸಹಜ. ಅದೇ ರೀತಿ ಸೋಲು ಎದುರಿಸಿದ ಮೇಲೆ ಗೆಲುವು ಸಿಗುತ್ತದೆ. ಈ ನಿಜಾಂಶ ತಿಳಿದುಕೊಳ್ಳಬೇಕು. ಮೊದಲಿಗೆ ನಮಗೆ ತಾಳ್ಮೆ ಇರಬೇಕು. ʼಬಘೀರʼ ಆಗಿದ್ದು ಅದೃಷ್ಟದಿಂದಲ್ಲ, ಪರಿಶ್ರಮದಿಂದ. ಶ್ರಮದಿಂದ ಗೆಲುವು ಸಿಕ್ಕಿತು. ಗೆಲುವು ಕೊಡುವುದು ಅಭಿಮಾನಿಗಳು. ನಿಮಗೆ ಒಳ್ಳೆಯದಾಗುತ್ತದೆ. ಅದಕ್ಕಾಗಿ ಕಾಯಬೇಕುʼ ಎಂದರು.

ನಟ ಅನೀಶ್ ಮಾತನಾಡಿ, ʼಕಷ್ಟಪಡುತ್ತಿದ್ದರೆ ಒಂದಲ್ಲ ಒಂದು ದಿನ ಫಲ ಸಿಗುತ್ತದೆ ಎನ್ನುವುದಕ್ಕೆ ಮುರಳಿ ಒಳ್ಳೆಯ ಉದಾಹರಣೆ. ಚಿತ್ರರಂಗದಲ್ಲಿ ಒಬ್ಬರಿಗೊಬ್ಬರು ಬೆಂಬಲ ಕೊಡುವುದಿಲ್ಲ ಎಂಬ ಮಾತಿದೆ. ಶ್ರೀಮುರಳಿ ಯಾವತ್ತೂ ಬೆಂಬಲಕ್ಕೆ ನಿಂತಿದ್ದಾರೆ. ಇದು ನನ್ನ 12ನೇ ಸಿನಿಮಾ. ಚಿತ್ರರಂಗಕ್ಕೆ ಬಂದು ಅನೀಶ್ 14 ವರ್ಷವಾಯ್ತು ಎನ್ನುತ್ತಾರೆ. ನನಗೆ ಯಾವುದು ನೆನಪಿಲ್ಲ. 12ನೇ ಶುಕ್ರವಾರ ಎದುರಿಸ್ತಿದ್ದೇನೆ. ಅನೀಶ್ ನಟನೆ, ಡ್ಯಾನ್ಸ್, ಆಕ್ಷನ್ ಎಲ್ಲಾ ಚೆನ್ನಾಗಿ ಮಾಡಿದ್ದಾನೆ ಎನ್ನುತ್ತಾರೆ. ಈ ಪಯಣದಲ್ಲಿ ಏನು ಕಲಿತೆ ಎಂದರೆ, ನಾನು ಒಳ್ಲೆಯ ನಟ ಆಗಿರಬಹುದು. ಒಳ್ಳೆಯ ನಟ ಶುಕ್ರವಾರದ ಬಾಕ್ಸಾಫೀಸ್ ನಲ್ಲಿ ಸೋತರೆ ಕೆಟ್ಟ ನಟನಾಗುತ್ತಾನೆʼ ಎಂದರು.

ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರುವ ಅನೀಶ್ ತೇಜೇಶ್ವರ್, ಈ ಬಾರಿ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದಲ್ಲಿ ನಟಿಸಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಅಭಿಷೇಕ್ ಶೆಟ್ಟಿ, ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು.

ʼಆರಾಮ್ ಅರವಿಂದ್ ಸ್ವಾಮಿʼ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಶಿವಸಾಗರ್ ಛಾಯಾಗ್ರಹನ ಮಾಡಿದ್ದರೆ. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

43 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago