Categories: ಮನರಂಜನೆ

‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಕೇವಲ 99 ರೂ.ಗೆ ನೋಡಿ …

ಅನೀಶ್ ತೇಜೇಶ್ವರ್ ಅಭಿನಯದ ʼಆರಾಮ್ ಅರವಿಂದಸ್ವಮಿʼ ಚಿತ್ರವು ನವೆಂಬರ್ ೨೨ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಲು ಪ್ರೇಕ್ಷಕರನ್ನು ಸೆಳೆಯುವುದಕ್ಕೆ ಚಿತ್ರತಂಡದವರು ಒಂದು ಆಫರ್ ಇಟ್ಟಿದ್ದಾರೆ. ಚಿತ್ರದ ಟಿಕೆಟ್ ದರವನ್ನು ಇಳಿಸಲಾಗಿದ್ದು, ಬಿಡುಗಡೆಯಾದ ಮೊದಲ ಮೂರು ದಿನಗಳ ಕಾಲ, ಟಿಕೆಟ್ ದರ ಕೇವಲ ೯೯ ರೂ. ಇರುತ್ತದೆ. ಈ ಆಫರ್ ಕೇವಲ ಮೂರು ದಿನಗಳ ಕಾಲ ಮಾತ್ರ. ನ.೨೨ರಿಂದ ೨೪ರವರೆಗೂ ಟಿಕೆಟ್ ದರ ೯೯ ರೂ.ಗಳಿದ್ದು, ಸೋಮವಾರದಿಂದ (ನ.೨೫) ಬೆಲೆ ಮಾಮೂಲಿಯಂತಿರಲಿದೆ.

ಇತ್ತೀಚೆಗೆ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ಈ ಕಾರ್ಯಕ್ರಮಕ್ಕೆ ಶ್ರೀಮುರಳಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಬದಲ್ಲಿ ಮಾತನಾಡಿದ ಶ್ರೀಮುರಳಿ, ʼನನಗೆ ಟೈಟಲ್ ತುಂಬಾ ಇಷ್ಟವಾಯಿತು. ಯಶಸ್ಸು ಸಿಕ್ಕ ಮೇಲೆ ಸೋಲು ಸಹಜ. ಅದೇ ರೀತಿ ಸೋಲು ಎದುರಿಸಿದ ಮೇಲೆ ಗೆಲುವು ಸಿಗುತ್ತದೆ. ಈ ನಿಜಾಂಶ ತಿಳಿದುಕೊಳ್ಳಬೇಕು. ಮೊದಲಿಗೆ ನಮಗೆ ತಾಳ್ಮೆ ಇರಬೇಕು. ʼಬಘೀರʼ ಆಗಿದ್ದು ಅದೃಷ್ಟದಿಂದಲ್ಲ, ಪರಿಶ್ರಮದಿಂದ. ಶ್ರಮದಿಂದ ಗೆಲುವು ಸಿಕ್ಕಿತು. ಗೆಲುವು ಕೊಡುವುದು ಅಭಿಮಾನಿಗಳು. ನಿಮಗೆ ಒಳ್ಳೆಯದಾಗುತ್ತದೆ. ಅದಕ್ಕಾಗಿ ಕಾಯಬೇಕುʼ ಎಂದರು.

ನಟ ಅನೀಶ್ ಮಾತನಾಡಿ, ʼಕಷ್ಟಪಡುತ್ತಿದ್ದರೆ ಒಂದಲ್ಲ ಒಂದು ದಿನ ಫಲ ಸಿಗುತ್ತದೆ ಎನ್ನುವುದಕ್ಕೆ ಮುರಳಿ ಒಳ್ಳೆಯ ಉದಾಹರಣೆ. ಚಿತ್ರರಂಗದಲ್ಲಿ ಒಬ್ಬರಿಗೊಬ್ಬರು ಬೆಂಬಲ ಕೊಡುವುದಿಲ್ಲ ಎಂಬ ಮಾತಿದೆ. ಶ್ರೀಮುರಳಿ ಯಾವತ್ತೂ ಬೆಂಬಲಕ್ಕೆ ನಿಂತಿದ್ದಾರೆ. ಇದು ನನ್ನ 12ನೇ ಸಿನಿಮಾ. ಚಿತ್ರರಂಗಕ್ಕೆ ಬಂದು ಅನೀಶ್ 14 ವರ್ಷವಾಯ್ತು ಎನ್ನುತ್ತಾರೆ. ನನಗೆ ಯಾವುದು ನೆನಪಿಲ್ಲ. 12ನೇ ಶುಕ್ರವಾರ ಎದುರಿಸ್ತಿದ್ದೇನೆ. ಅನೀಶ್ ನಟನೆ, ಡ್ಯಾನ್ಸ್, ಆಕ್ಷನ್ ಎಲ್ಲಾ ಚೆನ್ನಾಗಿ ಮಾಡಿದ್ದಾನೆ ಎನ್ನುತ್ತಾರೆ. ಈ ಪಯಣದಲ್ಲಿ ಏನು ಕಲಿತೆ ಎಂದರೆ, ನಾನು ಒಳ್ಲೆಯ ನಟ ಆಗಿರಬಹುದು. ಒಳ್ಳೆಯ ನಟ ಶುಕ್ರವಾರದ ಬಾಕ್ಸಾಫೀಸ್ ನಲ್ಲಿ ಸೋತರೆ ಕೆಟ್ಟ ನಟನಾಗುತ್ತಾನೆʼ ಎಂದರು.

ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರುವ ಅನೀಶ್ ತೇಜೇಶ್ವರ್, ಈ ಬಾರಿ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದಲ್ಲಿ ನಟಿಸಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಅಭಿಷೇಕ್ ಶೆಟ್ಟಿ, ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು.

ʼಆರಾಮ್ ಅರವಿಂದ್ ಸ್ವಾಮಿʼ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಶಿವಸಾಗರ್ ಛಾಯಾಗ್ರಹನ ಮಾಡಿದ್ದರೆ. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

7 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

44 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago