Categories: ಮನರಂಜನೆ

‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಕೇವಲ 99 ರೂ.ಗೆ ನೋಡಿ …

ಅನೀಶ್ ತೇಜೇಶ್ವರ್ ಅಭಿನಯದ ʼಆರಾಮ್ ಅರವಿಂದಸ್ವಮಿʼ ಚಿತ್ರವು ನವೆಂಬರ್ ೨೨ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಲು ಪ್ರೇಕ್ಷಕರನ್ನು ಸೆಳೆಯುವುದಕ್ಕೆ ಚಿತ್ರತಂಡದವರು ಒಂದು ಆಫರ್ ಇಟ್ಟಿದ್ದಾರೆ. ಚಿತ್ರದ ಟಿಕೆಟ್ ದರವನ್ನು ಇಳಿಸಲಾಗಿದ್ದು, ಬಿಡುಗಡೆಯಾದ ಮೊದಲ ಮೂರು ದಿನಗಳ ಕಾಲ, ಟಿಕೆಟ್ ದರ ಕೇವಲ ೯೯ ರೂ. ಇರುತ್ತದೆ. ಈ ಆಫರ್ ಕೇವಲ ಮೂರು ದಿನಗಳ ಕಾಲ ಮಾತ್ರ. ನ.೨೨ರಿಂದ ೨೪ರವರೆಗೂ ಟಿಕೆಟ್ ದರ ೯೯ ರೂ.ಗಳಿದ್ದು, ಸೋಮವಾರದಿಂದ (ನ.೨೫) ಬೆಲೆ ಮಾಮೂಲಿಯಂತಿರಲಿದೆ.

ಇತ್ತೀಚೆಗೆ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ಈ ಕಾರ್ಯಕ್ರಮಕ್ಕೆ ಶ್ರೀಮುರಳಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಬದಲ್ಲಿ ಮಾತನಾಡಿದ ಶ್ರೀಮುರಳಿ, ʼನನಗೆ ಟೈಟಲ್ ತುಂಬಾ ಇಷ್ಟವಾಯಿತು. ಯಶಸ್ಸು ಸಿಕ್ಕ ಮೇಲೆ ಸೋಲು ಸಹಜ. ಅದೇ ರೀತಿ ಸೋಲು ಎದುರಿಸಿದ ಮೇಲೆ ಗೆಲುವು ಸಿಗುತ್ತದೆ. ಈ ನಿಜಾಂಶ ತಿಳಿದುಕೊಳ್ಳಬೇಕು. ಮೊದಲಿಗೆ ನಮಗೆ ತಾಳ್ಮೆ ಇರಬೇಕು. ʼಬಘೀರʼ ಆಗಿದ್ದು ಅದೃಷ್ಟದಿಂದಲ್ಲ, ಪರಿಶ್ರಮದಿಂದ. ಶ್ರಮದಿಂದ ಗೆಲುವು ಸಿಕ್ಕಿತು. ಗೆಲುವು ಕೊಡುವುದು ಅಭಿಮಾನಿಗಳು. ನಿಮಗೆ ಒಳ್ಳೆಯದಾಗುತ್ತದೆ. ಅದಕ್ಕಾಗಿ ಕಾಯಬೇಕುʼ ಎಂದರು.

ನಟ ಅನೀಶ್ ಮಾತನಾಡಿ, ʼಕಷ್ಟಪಡುತ್ತಿದ್ದರೆ ಒಂದಲ್ಲ ಒಂದು ದಿನ ಫಲ ಸಿಗುತ್ತದೆ ಎನ್ನುವುದಕ್ಕೆ ಮುರಳಿ ಒಳ್ಳೆಯ ಉದಾಹರಣೆ. ಚಿತ್ರರಂಗದಲ್ಲಿ ಒಬ್ಬರಿಗೊಬ್ಬರು ಬೆಂಬಲ ಕೊಡುವುದಿಲ್ಲ ಎಂಬ ಮಾತಿದೆ. ಶ್ರೀಮುರಳಿ ಯಾವತ್ತೂ ಬೆಂಬಲಕ್ಕೆ ನಿಂತಿದ್ದಾರೆ. ಇದು ನನ್ನ 12ನೇ ಸಿನಿಮಾ. ಚಿತ್ರರಂಗಕ್ಕೆ ಬಂದು ಅನೀಶ್ 14 ವರ್ಷವಾಯ್ತು ಎನ್ನುತ್ತಾರೆ. ನನಗೆ ಯಾವುದು ನೆನಪಿಲ್ಲ. 12ನೇ ಶುಕ್ರವಾರ ಎದುರಿಸ್ತಿದ್ದೇನೆ. ಅನೀಶ್ ನಟನೆ, ಡ್ಯಾನ್ಸ್, ಆಕ್ಷನ್ ಎಲ್ಲಾ ಚೆನ್ನಾಗಿ ಮಾಡಿದ್ದಾನೆ ಎನ್ನುತ್ತಾರೆ. ಈ ಪಯಣದಲ್ಲಿ ಏನು ಕಲಿತೆ ಎಂದರೆ, ನಾನು ಒಳ್ಲೆಯ ನಟ ಆಗಿರಬಹುದು. ಒಳ್ಳೆಯ ನಟ ಶುಕ್ರವಾರದ ಬಾಕ್ಸಾಫೀಸ್ ನಲ್ಲಿ ಸೋತರೆ ಕೆಟ್ಟ ನಟನಾಗುತ್ತಾನೆʼ ಎಂದರು.

ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರುವ ಅನೀಶ್ ತೇಜೇಶ್ವರ್, ಈ ಬಾರಿ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದಲ್ಲಿ ನಟಿಸಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಅಭಿಷೇಕ್ ಶೆಟ್ಟಿ, ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು.

ʼಆರಾಮ್ ಅರವಿಂದ್ ಸ್ವಾಮಿʼ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದು, ಶಿವಸಾಗರ್ ಛಾಯಾಗ್ರಹನ ಮಾಡಿದ್ದರೆ. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

32 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

1 hour ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

15 hours ago