ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್ ಪ್ರಭಾಸ್ ನೆರವಾಗಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್ ಪ್ರಭಾಸ್ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಕೇರಳ ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ನಟ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ವಯನಾಡು ಭೂಕುಸಿತ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸೂರ್ಯ ದಂಪತಿ, ರಶ್ಮಿಕಾ ಮಂದಣ್ಣ, ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಹಲವರು ದೇಣಿಗೆ ನೀಡಿದ್ದರು. ಈಗ ಡಾರ್ಲಿಂಗ್ ಪ್ರಭಾಸ್ 2 ಕೋಟಿ ದೇಣಿಗೆ ನೀಡಿದ್ದು, ಸಂತ್ರಸ್ತರ ಬಾಳಿಗೆ ಬೆಳಕಾಗಿದ್ದಾರೆ.
ಇನ್ನು ವಯನಾಡು ದುರಂತದಲ್ಲಿ 400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಕಾರ್ಯಾಚರಣೆಗೆ ಪದೇ ಪದೇ ಮಳೆಯೂ ಕೂಡ ಅಡ್ಡಿಪಡಿಸುತ್ತಿದೆ.
ಆದರೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಶವಗಳು ಪತ್ತೆಯಾಗುತ್ತಲೇ ಇವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…