ಮನರಂಜನೆ

ಶಿವರಾಜ್‌ಕುಮಾರ್‌ ಸಿನಿಮಾಗಳ ಮೇಲೆ ನಿರ್ಬಂಧಕ್ಕೆ ಮನವಿ; ಚುನಾವಣಾ ಆಯೋಗ ಹೇಳಿದ್ದಿಷ್ಟು

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ನಡೆ ವಿರುದ್ಧ ಕೂಗು ಕೇಳಿಬಂದಿತ್ತು.

ಶಿವರಾಜ್‌ಕುಮಾರ್‌ ನಟನೆಯ ಯಾವುದೇ ಚಿತ್ರಗಳು ಹಾಗೂ ಜಾಹೀರಾತುಗಳನ್ನು ದೂರದರ್ಶನ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಬಾರದು ಮತ್ತು ದಿನಪತ್ರಿಕೆಗಳಲ್ಲಿಯೂ ಸಹ ಶಿವರಾಜ್‌ಕುಮಾರ್‌ ಇರುವ ಜಾಹೀರಾತುಗಳನ್ನು ಬಳಸಬಾರದಂತೆ ನಿಷೇಧ ಹೇರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಕೌಟಿಲ್ಯ ರಘು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಶಿವರಾಜ್‌ಕುಮಾರ್‌ ಸಿನಿಮಾಗಳ ಮೇಲೆ ನಿಷೇಧ ಹೇರುವುದು ಸಾಧ್ಯವಿಲ್ಲ ಎಂದಿದ್ದಾರೆ. “ಚುನಾವಣೆಗೆ ಸ್ಪರ್ಧಿಸುವ ಅಥವಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಕಲಾವಿದರ ಚಿತ್ರಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು. ಖಾಸಗಿ ಟಿವಿ ಚಾನೆಲ್‌ಗಳು ಮತ್ತು ಚಿತ್ರಮಂದಿರಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

andolana

Recent Posts

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

6 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

7 hours ago

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

12 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

12 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

12 hours ago