ಮನರಂಜನೆ

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್‌ ಹೇಳಿದ್ದಾರೆ.

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್.28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಯಶ್‍ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

‘ದೊಡ್ಡ ಸ್ಟಾರ್‍ ನಟರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್‍, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದು, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ ಹೇಳಿದ್ದಾರೆ.

ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ ಎಂದ ಯಶ್‍, ‘ಹಿಂದೆ ನಾನು ಸಹ ಸಂದರ್ಶನವೊಂದರಲ್ಲಿ ಜನ ಬೇರೆ ಭಾಷೆ ಸಿನಿಮಾಗಳನ್ನೇ ನೋಡುತ್ತಾರೆ ಎಂದು ದೂರಿದ್ದೆ. ಮೊದಲು ನಮ್ಮ ಕೆಲಸವನ್ನು ನಾವು ಸರಿ ಮಾಡಿಕೊಂಡು, ಒಳ್ಳೆಯ ಸಿನಿಮಾಗಳನ್ನು ಕೊಟ್ಟರೆ ಕನ್ನಡಿಗರು ಯಾವತ್ತೂ ನಮ್ಮ ಕೈ ಬಿಟ್ಟಿಲ್ಲ. ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ’ ಎಂದರು.

ಬರೀ ನಟನೆಯಷ್ಟೇ ಸಿನಿಮಾ ಅಲ್ಲ, ಬೇರೆ ವಿಷಯಗಳ ಬಗ್ಗೆಯೂ ಗಮನಹರಿಸಬೇಕು ಎಂದ ಯಶ್, ‘ವೃತ್ತಿ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು, ಟ್ರೆಂಡ್‍ ಹೇಗಿದೆ, ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಬರಬೇಕು’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

42 mins ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

1 hour ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

2 hours ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

2 hours ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

2 hours ago