ಮನರಂಜನೆ

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್‌ ಹೇಳಿದ್ದಾರೆ.

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್.28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಯಶ್‍ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

‘ದೊಡ್ಡ ಸ್ಟಾರ್‍ ನಟರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್‍, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದು, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ ಹೇಳಿದ್ದಾರೆ.

ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ ಎಂದ ಯಶ್‍, ‘ಹಿಂದೆ ನಾನು ಸಹ ಸಂದರ್ಶನವೊಂದರಲ್ಲಿ ಜನ ಬೇರೆ ಭಾಷೆ ಸಿನಿಮಾಗಳನ್ನೇ ನೋಡುತ್ತಾರೆ ಎಂದು ದೂರಿದ್ದೆ. ಮೊದಲು ನಮ್ಮ ಕೆಲಸವನ್ನು ನಾವು ಸರಿ ಮಾಡಿಕೊಂಡು, ಒಳ್ಳೆಯ ಸಿನಿಮಾಗಳನ್ನು ಕೊಟ್ಟರೆ ಕನ್ನಡಿಗರು ಯಾವತ್ತೂ ನಮ್ಮ ಕೈ ಬಿಟ್ಟಿಲ್ಲ. ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ’ ಎಂದರು.

ಬರೀ ನಟನೆಯಷ್ಟೇ ಸಿನಿಮಾ ಅಲ್ಲ, ಬೇರೆ ವಿಷಯಗಳ ಬಗ್ಗೆಯೂ ಗಮನಹರಿಸಬೇಕು ಎಂದ ಯಶ್, ‘ವೃತ್ತಿ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು, ಟ್ರೆಂಡ್‍ ಹೇಗಿದೆ, ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಬರಬೇಕು’ ಎಂದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

19 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

1 day ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

1 day ago