ಮೊದಲು ಅಪ್ಗ್ರೇಡ್ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್ ಹೇಳಿದ್ದಾರೆ.
ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್.28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಯಶ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.
‘ದೊಡ್ಡ ಸ್ಟಾರ್ ನಟರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್, ಟ್ರೇಲರ್ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದು, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್ ಹೇಳಿದ್ದಾರೆ.
ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ ಎಂದ ಯಶ್, ‘ಹಿಂದೆ ನಾನು ಸಹ ಸಂದರ್ಶನವೊಂದರಲ್ಲಿ ಜನ ಬೇರೆ ಭಾಷೆ ಸಿನಿಮಾಗಳನ್ನೇ ನೋಡುತ್ತಾರೆ ಎಂದು ದೂರಿದ್ದೆ. ಮೊದಲು ನಮ್ಮ ಕೆಲಸವನ್ನು ನಾವು ಸರಿ ಮಾಡಿಕೊಂಡು, ಒಳ್ಳೆಯ ಸಿನಿಮಾಗಳನ್ನು ಕೊಟ್ಟರೆ ಕನ್ನಡಿಗರು ಯಾವತ್ತೂ ನಮ್ಮ ಕೈ ಬಿಟ್ಟಿಲ್ಲ. ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ’ ಎಂದರು.
ಬರೀ ನಟನೆಯಷ್ಟೇ ಸಿನಿಮಾ ಅಲ್ಲ, ಬೇರೆ ವಿಷಯಗಳ ಬಗ್ಗೆಯೂ ಗಮನಹರಿಸಬೇಕು ಎಂದ ಯಶ್, ‘ವೃತ್ತಿ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು, ಟ್ರೆಂಡ್ ಹೇಗಿದೆ, ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಬರಬೇಕು’ ಎಂದರು.
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…