ಮನರಂಜನೆ

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್‌ ಹೇಳಿದ್ದಾರೆ.

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಮಾರ್ಚ್.28ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಯಶ್‍ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

‘ದೊಡ್ಡ ಸ್ಟಾರ್‍ ನಟರು ತಮ್ಮ ಚಿತ್ರಗಳನ್ನು ಪ್ರಚಾರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಚಿತ್ರರಂಗದಲ್ಲಿದೆ. ಹಾಗಾಗಿ, ಬಹಳಷ್ಟು ಜನ ತಮ್ಮ ಚಿತ್ರಗಳ ಪೋಸ್ಟರ್, ಟೀಸರ್‍, ಟ್ರೇಲರ್‌ಗಳನ್ನು ದೊಡ್ಡ ನಟರಿಂದ ಬಿಡುಗಡೆ ಮಾಡಿಸುವುದಕ್ಕೆ ಮುಂದಾಗುತ್ತಿದ್ದಾರೆ. ಆದರೆ, ನಾವು ಬರುವುದರಿಂದ ಚಿತ್ರ ಗೆಲ್ಲುವುದು, ಚಿತ್ರ ಗೆಲ್ಲೋದು ನಿಮ್ಮ ಕೆಲಸಗಳಿಂದ ಎಂದು ಯಶ್‍ ಹೇಳಿದ್ದಾರೆ.

ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ ಎಂದ ಯಶ್‍, ‘ಹಿಂದೆ ನಾನು ಸಹ ಸಂದರ್ಶನವೊಂದರಲ್ಲಿ ಜನ ಬೇರೆ ಭಾಷೆ ಸಿನಿಮಾಗಳನ್ನೇ ನೋಡುತ್ತಾರೆ ಎಂದು ದೂರಿದ್ದೆ. ಮೊದಲು ನಮ್ಮ ಕೆಲಸವನ್ನು ನಾವು ಸರಿ ಮಾಡಿಕೊಂಡು, ಒಳ್ಳೆಯ ಸಿನಿಮಾಗಳನ್ನು ಕೊಟ್ಟರೆ ಕನ್ನಡಿಗರು ಯಾವತ್ತೂ ನಮ್ಮ ಕೈ ಬಿಟ್ಟಿಲ್ಲ. ಅಭಿಮಾನಿಗಳು ಯಾವತ್ತಿದ್ದರೂ ಒಳ್ಳೆಯ ಸಿನಿಮಾಗಳನ್ನು ಹರಸುತ್ತಾರೆ’ ಎಂದರು.

ಬರೀ ನಟನೆಯಷ್ಟೇ ಸಿನಿಮಾ ಅಲ್ಲ, ಬೇರೆ ವಿಷಯಗಳ ಬಗ್ಗೆಯೂ ಗಮನಹರಿಸಬೇಕು ಎಂದ ಯಶ್, ‘ವೃತ್ತಿ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು, ಟ್ರೆಂಡ್‍ ಹೇಗಿದೆ, ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಬರಬೇಕು’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago