ಮನರಂಜನೆ

ಮದುವೆ ಸಂಭ್ರಮ: ಹಳದಿ ಶಾಸ್ತ್ರದಲ್ಲಿ ಮಿಂಚಿದ ಡಾಲಿ ಧನಂಜಯ್‌-ಧನ್ಯತಾ

ಮೈಸೂರು: ನಟ ಡಾಲಿ ಧನಂಜಯ್‌ ಹಾಗೂ ಡಾಕ್ಟರ್‌ ಧನ್ಯತಾ ನಿವಾಸದಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ನವ ಜೋಡಿಗಳು ಹಳದಿ ಶಾಸ್ತ್ರದಲ್ಲಿ ಮಿಂಚಿದ್ದಾರೆ.

ಧನಂಜಯ್‌ ಮತ್ತು ಧನ್ಯತಾ ಅವರ ಹಳದಿ ಶಾಸ್ತ್ರ ಶುಕ್ರವಾರ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ನಡೆದಿದ್ದು ಕುಟುಂಬದವರು, ನಟ, ನಟಿಯರು, ಹಾಗೂ ಸ್ನೇಹಿತರು ಆಗಮಿಸಿ ಶುಭ ಕೋರಿದ್ದಾರೆ. ಅಲ್ಲದೇ ಈ ಹಳದಿ ಶಾಸ್ತ್ರಕ್ಕೆ ಜರ್ಮನಿಯ ರಂಗ ನಿರ್ದೇಶಕ ಕ್ರಿಸ್ಟೆನ್‌ ಭಾಗವಹಿಸಿದ್ದು ಸಹ ವಿಶೇಷವಾಗಿತ್ತು.

ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಇಂದು(ಫೆಬ್ರವರಿ.15) ನಟ ಮತ್ತು ಡಾಕ್ಟರ್‌ ಜೋಡಿಯ ಆರತಕ್ಷತೆ ನಡೆಯಲಿದೆ. ಇಂದು ಬೆಳಿಗ್ಗೆಯಿಂದಲೇ ಮದುವೆಗೆ ಸಂಬಂಧಪಟ್ಟ ಎಲ್ಲಾ ಶಾಸ್ತ್ರಗಳು ನಡೆಯಲಿವೆ. ಇನ್ನು ಸಂಜೆ 6 ಗಂಟೆಯ ನಂತರ ಆರಕ್ಷತೆ ಕಾರ್ಯಕ್ರಮ ಇರಲಿದೆ.

ನಾಳೆ(ಫೆಬ್ರವರಿ.16) ಬೆಳಿಗ್ಗೆ ಧಾರಾ ಮುಹೂರ್ತ ನಡೆಯಲಿದೆ. ಆರಕ್ಷತೆಗೆ ಸ್ಯಾಂಡಲ್‌ವುಡ್‌ ತಾರೆಯರು, ರಾಜಕೀಯ ರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

11 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

29 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

44 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

1 hour ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago