ಮನರಂಜನೆ

ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ಸುದೀಪ್‍ ಪ್ರಶ್ನೆ

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ ಕೈ ಹಿಡಿದಿರಬೇಕಾದರೆ, ಬೆಳೆಯುವ ಪ್ರಯತ್ನ ಮಾಡಬೇಕು. ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ಮಾಡಬೇಕು…’

ಹಾಗಂತ ಸುದೀಪ್‍ ಹೇಳಿದ್ದಾರೆ. ಅವರು ಹಾಗೆ ಹೇಳುವುದಕ್ಕೆ ಕಾರಣವೂ ಇದೆ. ಇತ್ತೀಚೆಗೆ ಸುದೀಪ್‍ ಅಭಿನಯದ ಹೊಸ ಚಿತ್ರ ‘ಮ್ಯಾಕ್ಸ್’ ಬಿಡುಗಡೆಯಾದ ಸಂದರ್ಭದಲ್ಲಿ, ಅವರ ಆಪ್ತರು ಕೇಕ್‍ ಮೇಲೆ ‘Bossism ಕಾಲ ಮುಗೀತು, Maximum ಕಾಲ ಶುರುವಾಯ್ತು’ ಎಂದು ಬರೆಸಿದ್ದರು. ಕನ್ನಡ ಚಿತ್ರರಂಗದಲ್ಲಿ ಡಿ ಬಾಸ್‍ ಎಂದು ದರ್ಶನ್‍ಗೆ ಕರೆಯುವುದರಿಂದ, ಈ ಮೂಲಕ ದರ್ಶನ್‍ಗೆ ಸುದೀಪ್‍ ಟಾಂಟ್ ಕೊಡುತ್ತಿದ್ದಾರೆ ಎಂದು ಸುದ್ದಿಯಾಯಿತು. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಸುದೀಪ್‍ ಅವರ ಆಪ್ತ ಪ್ರದೀಪ್‍ ಈ ಸಂಬಂಧ ಸಮಜಾಯಿಷಿ ಕೊಡುವ ಪ್ರಯತ್ನ ಮಾಡಿದರಾದರೂ, ಟೀಕೆಗಳು ಮುಂದುವರೆದಿದ್ದವು.

ಈ ಹಿನ್ನೆಲೆಯಲ್ಲಿ ಸುದೀಪ್ ‍ಮೊದಲ ಬಾರಿಗೆ ಮಾತನಾಡಿದ್ದಾರೆ. ಈ ಕುರಿತು ಸೋಮವಾರ ರಾತ್ರಿ ನಡೆದ ‘ಮ್ಯಾಕ್ಸ್’ ಚಿತ್ರದ ಸಂತೋಟಕೂಟದಲ್ಲಿ ಮಾತನಾಡಿದ ಸುದೀಪ್‍, ‘ನನ್ನ ಹುಡುಗನೊಬ್ಬ ಚಿತ್ರಮಂದಿರಕ್ಕೆ ಹೋಗಿ ಚಿತ್ರ ನೋಡುತ್ತಾನೆ. ಚಿತ್ರ ನೋಡಿ ಬಂದು, ‘ಇವತ್ತಿನಿಂದ ಕಿಚ್ಚ ಬಾಸ್‍ ಅಂತ ಕರೆಯೋದು ನಿಲ್ಲಿಸಿ, ಕಿಚ್ಚ ಮಾಸ್‍ ಅಂತ ಕರೆಯಿರಿ’ ಎಂದು ಹೇಳುತ್ತಾನೆ. ಅದನ್ನೇ ಕೇಕ್‍ ಮೇಲೆ ಬರೆಸಿ ತರುತ್ತಾರೆ. ಅದನ್ನು ನೋಡಿದ ಒಂದು ವಾಹಿನಿಯವರು, ‘ಯಾರಿಗೋ ಟಾಂಟ್ ಕೊಟ್ರಾ ಕಿಚ್ಚ?’ ಎಂದು ಸುದ್ದಿ ಮಾಡುತ್ತಾರೆ. ನನಗೆ ಟಾಂಟ್ ಕೊಡುವ ಯೋಚನೆಯೇ ಇಲ್ಲ. ನಾನು ಬಾಸ್‍ ಅಂತ ಕರೆಯೋದು ನನ್ನ ತಂದೆಗೆ ಮಾತ್ರ. ಅವರು ಹಾಗೆ ಬರೆಸಿ ತಂದಾಗ, ನನ್ನ ತಂದೆ ಬಗ್ಗೆ ಹೇಳುತ್ತಿದ್ದೀಯ ಎಂದು ಕೇಳಬೇಕಿತ್ತು. ಆದರೆ, ಆ ಹುಡುಗನ ಮನಸ್ಸು ನನಗೆ ಚೆನ್ನಾಗಿ ಗೊತ್ತು’ ಎಂದರು.

‘ದರ್ಶನ್‍ ಅವರ ಅಭಿಮಾನಿಗಳಿಗೆ ಬಯ್ಯಬೇಡಿ. ಅವರು ನೋವಿನಲ್ಲಿದ್ದಾರೆ ಎಂದು ನಾನು ಈ ಮೊದಲು ಹೇಳಿದ್ದೆ. ಈ ಮಾತನ್ನು ನಾನು ಹೇಳಿರುವಾಗ, ಯಾಕೆ ಟಾಂಗ್‍ ಕೊಡಲಿ? ನಾವು ಯಾರಿಗೆ ಟಾಂಟ್‍ ಕೊಡುತ್ತಿದ್ದೀನಿ ಎಂದು ಹೇಳುತ್ತಿದ್ದಾರೋ, ಅವರು ನನ್ನ ಸಹೋದರನ ತರಹ ಇದ್ದವರು. ಒಬ್ಬ ನಟನ ಹೆಸರು ಮಾತ್ರ ತೆಗೆದುಕೊಂಡು ಟಾಂಟ್‍ ಎನ್ನುತ್ತಿದ್ದಾರೆ. ಯಶ್‍ಗೆ ಅವರ ಅಭಿಮಾನಿಗಳು ಯಶ್‍ ಬಾಸ್‍ ಎನ್ನುತ್ತಾರೆ. ಧ್ರುವಂಗೆ ಧ್ರುವ ಬಾಸ್‍, ಶಿವಣ್ಣ ಬಾಸ್‍, ಉಪ್ಪಿ ಬಾಸ್‍ ಎನ್ನುತ್ತಾರೆ. ಎಲ್ಲಾ ಅಭಿಮಾನಿಗಳಿಗೂ ಅವರ ಮೆಚ್ಚಿನ ನಟರು ಬಾಸ್‍ಗಳೇ. ನನಗೂ ದರ್ಶನ್‍ಗೂ ಏನೂ ಇಲ್ಲ. ಅವರು ಬಹಳ ಕಷ್ಟಪಟ್ಟು ಮೇಲೆ ಬಂದಿದ್ದಾರೆ’ ಎಂದರು.

ಕನ್ನಡ ಚಿತ್ರರಂಗ ಬಹಳ ನೋವಿನಲ್ಲಿದೆ ಎನ್ನುವ ಸುದೀಪ್, ‘ನಮ್ಮ ಹಿರಿಯರು ಚಿತ್ರರಂಗದ ಜವಾಬ್ದಾರಿಯನ್ನು ಹೊತ್ತು, ಅದನ್ನು ಬೆಳೆಸಿ, ಇವತ್ತು ನಮ್ಮ ಕೈಗೆ ಕೊಟ್ಟು ಹೋಗಿದ್ದಾರೆ. ಅದನ್ನು ಇನ್ನಷ್ಟು ಬೆಳೆಸಿ, ಮುಂದಿನ ತಲೆಮಾರಿನವರಿಗೆ ಕೊಟ್ಟು ಹೋಗಬೇಕು. ಇದೊಂದು ಕುಟುಂಬ, ಇದೊಂದು ಸಂಪ್ರದಾಯ. ಕನ್ನಡ ಚಿತ್ರರಂಗ ಮುಖ್ಯಾನಾ? ನೀನಾ-ನಾನಾ ಎನ್ನುವುದು ಮುಖ್ಯಾನಾ? ಇದು ಯಾವುದೂ ಮುಖ್ಯವಲ್ಲ’ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

21 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

55 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago