ಮನರಂಜನೆ

ಅಮೇರಿಕಾದಲ್ಲಿ ಶ್ರೇಯಸ್ ಮಂಜು ಏನ್ಮಾಡ್ತಿದ್ದಾರೆ?

ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್‍ ರಾಜಕುಮಾರ್ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ.

ಈ ಮಧ್ಯೆ, ಶ್ರೇಯಸ್‍ ಮಂಜು ಕಳೆದ ಎರಡು ವಾರಗಳಿಂದ ಅಮೇರಿಕಾದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಬರಬಹುದು. ಶ್ರೇಯಸ್‍ ನಟನೆ ಮತ್ತು ಸಾಹಸದ ಬಗ್ಗೆ ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಈ ಕುರಿತು ಸಂದೇಶ ಕಳಿಸಿರುವ ಶ್ರೇಯಸ್‍, ‘ಎರಡು ವಾರಗಳಿಂದ ಅಮೇರಿಕಾದಲ್ಲಿದ್ದೇನೆ. ಹೊಸಹೊಸ ಜನರನ್ನು ಭೇಟಿ ಆಗುವುದರ ಜೊತೆಗೆ, ಮುಂದಿನ ವರ್ಷ ಪ್ರಾರಂಭವಾಗಲಿರುವ ಒಂದು ಅಂತಾರಾಷ್ಟ್ರೀಯ ಮಟ್ಟದ ಆ್ಯಕ್ಷನ್‍ ಸಿನಿಮಾದಲ್ಲಿ ನಟಿಸುವುದಕ್ಕೆ ಚರ್ಚೆ ನಡೆಯುತ್ತಿದೆ. ನ್ಯೂಯಾರ್ಕ್ ಮತ್ತು ಚಿಕಾಗೋ ನಗರದ ಹಲವು ಸಿನಿಮಾ ಶಾಲೆಗಳಲ್ಲಿ ನಟನೆಯ ಬಗ್ಗೆ ಮಾಸ್ಟರ್ ಕ್ಲಾಸ್‍ನಲ್ಲಿ ತರಬೇತಿ ಪಡೆಯುತ್ತಿದ್ದೇನೆ. ಹಾಗೆಯೇ, ಪಾರ್ಕರ್ ಎಂಬ ಸಾಹಸ ಕಲೆಯನ್ನು ಕಲಿಯುತ್ತಿದ್ದೇನೆ. ಹೆಚ್ಚಿನ ವಿಷಯಗಳನ್ನು ನನ್ನ ಮುಂದಿನ ಚಿತ್ರ ಮುಗಿದ ತಕ್ಷಣ ಹಂಚಿಕೊಳ್ಳಲಿದ್ದೇನೆ’ ಎಂದು ಹೇಳಿದ್ದಾರೆ.

ಅಂದಹಾಗೆ, ‘ವಿಷ್ಣುಪ್ರಿಯ’ ಚಿತ್ರವಲ್ಲದೆ ಶ್ರೇಯಸ್‍ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‍. ನಾರಾಯಣ್ ನಿರ್ದೇಶನದ ಚಿತ್ರವದು. ಈ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಪ್ರಾರಂಭವಾಗಿ ಒಂದಿಷ್ಟು ಭಾಗದ ಚಿತ್ರೀಕರಣ ಸಹ ಆಗಿದೆ. ಅಮೇರಿಕಾದಿಂದ ಶ್ರೇಯಸ್‍ ವಾಪಸ್ಸು ಬಂದ ತಕ್ಷಣ ಚಿತ್ರೀಕರಣ ಮುಂದುವರೆಯುವ ಸಾಧ್ಯತೆ ಇದೆ.

ಅಂದಹಾಗೆ, ಈ ಎರಡೂ ಚಿತ್ರಗಳನ್ನು ಕೆ. ಮಂಜು ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

1 hour ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

4 hours ago