ಮನರಂಜನೆ

ಅಮೇರಿಕಾದಲ್ಲಿ ಶ್ರೇಯಸ್ ಮಂಜು ಏನ್ಮಾಡ್ತಿದ್ದಾರೆ?

ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್‍ ರಾಜಕುಮಾರ್ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ.

ಈ ಮಧ್ಯೆ, ಶ್ರೇಯಸ್‍ ಮಂಜು ಕಳೆದ ಎರಡು ವಾರಗಳಿಂದ ಅಮೇರಿಕಾದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಬರಬಹುದು. ಶ್ರೇಯಸ್‍ ನಟನೆ ಮತ್ತು ಸಾಹಸದ ಬಗ್ಗೆ ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಈ ಕುರಿತು ಸಂದೇಶ ಕಳಿಸಿರುವ ಶ್ರೇಯಸ್‍, ‘ಎರಡು ವಾರಗಳಿಂದ ಅಮೇರಿಕಾದಲ್ಲಿದ್ದೇನೆ. ಹೊಸಹೊಸ ಜನರನ್ನು ಭೇಟಿ ಆಗುವುದರ ಜೊತೆಗೆ, ಮುಂದಿನ ವರ್ಷ ಪ್ರಾರಂಭವಾಗಲಿರುವ ಒಂದು ಅಂತಾರಾಷ್ಟ್ರೀಯ ಮಟ್ಟದ ಆ್ಯಕ್ಷನ್‍ ಸಿನಿಮಾದಲ್ಲಿ ನಟಿಸುವುದಕ್ಕೆ ಚರ್ಚೆ ನಡೆಯುತ್ತಿದೆ. ನ್ಯೂಯಾರ್ಕ್ ಮತ್ತು ಚಿಕಾಗೋ ನಗರದ ಹಲವು ಸಿನಿಮಾ ಶಾಲೆಗಳಲ್ಲಿ ನಟನೆಯ ಬಗ್ಗೆ ಮಾಸ್ಟರ್ ಕ್ಲಾಸ್‍ನಲ್ಲಿ ತರಬೇತಿ ಪಡೆಯುತ್ತಿದ್ದೇನೆ. ಹಾಗೆಯೇ, ಪಾರ್ಕರ್ ಎಂಬ ಸಾಹಸ ಕಲೆಯನ್ನು ಕಲಿಯುತ್ತಿದ್ದೇನೆ. ಹೆಚ್ಚಿನ ವಿಷಯಗಳನ್ನು ನನ್ನ ಮುಂದಿನ ಚಿತ್ರ ಮುಗಿದ ತಕ್ಷಣ ಹಂಚಿಕೊಳ್ಳಲಿದ್ದೇನೆ’ ಎಂದು ಹೇಳಿದ್ದಾರೆ.

ಅಂದಹಾಗೆ, ‘ವಿಷ್ಣುಪ್ರಿಯ’ ಚಿತ್ರವಲ್ಲದೆ ಶ್ರೇಯಸ್‍ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‍. ನಾರಾಯಣ್ ನಿರ್ದೇಶನದ ಚಿತ್ರವದು. ಈ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಪ್ರಾರಂಭವಾಗಿ ಒಂದಿಷ್ಟು ಭಾಗದ ಚಿತ್ರೀಕರಣ ಸಹ ಆಗಿದೆ. ಅಮೇರಿಕಾದಿಂದ ಶ್ರೇಯಸ್‍ ವಾಪಸ್ಸು ಬಂದ ತಕ್ಷಣ ಚಿತ್ರೀಕರಣ ಮುಂದುವರೆಯುವ ಸಾಧ್ಯತೆ ಇದೆ.

ಅಂದಹಾಗೆ, ಈ ಎರಡೂ ಚಿತ್ರಗಳನ್ನು ಕೆ. ಮಂಜು ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago