ಮನರಂಜನೆ

ಅಮೇರಿಕಾದಲ್ಲಿ ಶ್ರೇಯಸ್ ಮಂಜು ಏನ್ಮಾಡ್ತಿದ್ದಾರೆ?

ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್‍ ರಾಜಕುಮಾರ್ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ.

ಈ ಮಧ್ಯೆ, ಶ್ರೇಯಸ್‍ ಮಂಜು ಕಳೆದ ಎರಡು ವಾರಗಳಿಂದ ಅಮೇರಿಕಾದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಬರಬಹುದು. ಶ್ರೇಯಸ್‍ ನಟನೆ ಮತ್ತು ಸಾಹಸದ ಬಗ್ಗೆ ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಈ ಕುರಿತು ಸಂದೇಶ ಕಳಿಸಿರುವ ಶ್ರೇಯಸ್‍, ‘ಎರಡು ವಾರಗಳಿಂದ ಅಮೇರಿಕಾದಲ್ಲಿದ್ದೇನೆ. ಹೊಸಹೊಸ ಜನರನ್ನು ಭೇಟಿ ಆಗುವುದರ ಜೊತೆಗೆ, ಮುಂದಿನ ವರ್ಷ ಪ್ರಾರಂಭವಾಗಲಿರುವ ಒಂದು ಅಂತಾರಾಷ್ಟ್ರೀಯ ಮಟ್ಟದ ಆ್ಯಕ್ಷನ್‍ ಸಿನಿಮಾದಲ್ಲಿ ನಟಿಸುವುದಕ್ಕೆ ಚರ್ಚೆ ನಡೆಯುತ್ತಿದೆ. ನ್ಯೂಯಾರ್ಕ್ ಮತ್ತು ಚಿಕಾಗೋ ನಗರದ ಹಲವು ಸಿನಿಮಾ ಶಾಲೆಗಳಲ್ಲಿ ನಟನೆಯ ಬಗ್ಗೆ ಮಾಸ್ಟರ್ ಕ್ಲಾಸ್‍ನಲ್ಲಿ ತರಬೇತಿ ಪಡೆಯುತ್ತಿದ್ದೇನೆ. ಹಾಗೆಯೇ, ಪಾರ್ಕರ್ ಎಂಬ ಸಾಹಸ ಕಲೆಯನ್ನು ಕಲಿಯುತ್ತಿದ್ದೇನೆ. ಹೆಚ್ಚಿನ ವಿಷಯಗಳನ್ನು ನನ್ನ ಮುಂದಿನ ಚಿತ್ರ ಮುಗಿದ ತಕ್ಷಣ ಹಂಚಿಕೊಳ್ಳಲಿದ್ದೇನೆ’ ಎಂದು ಹೇಳಿದ್ದಾರೆ.

ಅಂದಹಾಗೆ, ‘ವಿಷ್ಣುಪ್ರಿಯ’ ಚಿತ್ರವಲ್ಲದೆ ಶ್ರೇಯಸ್‍ ಇನ್ನೂ ಒಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‍. ನಾರಾಯಣ್ ನಿರ್ದೇಶನದ ಚಿತ್ರವದು. ಈ ಚಿತ್ರದಲ್ಲಿ ‘ದುನಿಯಾ’ ವಿಜಯ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಪ್ರಾರಂಭವಾಗಿ ಒಂದಿಷ್ಟು ಭಾಗದ ಚಿತ್ರೀಕರಣ ಸಹ ಆಗಿದೆ. ಅಮೇರಿಕಾದಿಂದ ಶ್ರೇಯಸ್‍ ವಾಪಸ್ಸು ಬಂದ ತಕ್ಷಣ ಚಿತ್ರೀಕರಣ ಮುಂದುವರೆಯುವ ಸಾಧ್ಯತೆ ಇದೆ.

ಅಂದಹಾಗೆ, ಈ ಎರಡೂ ಚಿತ್ರಗಳನ್ನು ಕೆ. ಮಂಜು ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

8 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

9 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

9 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

10 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

10 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

11 hours ago