ಮನರಂಜನೆ

ವಿನೋದ್‍ ದೋಂಡಾಳೆ ಸಾವಿನ ನಂತರ ‘ಅಶೋಕ ಬ್ಲೇಡ್‍’ ಕಥೆಯೇನು?

ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ಚಿತ್ರವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿ ಶೇ. 70ರಷ್ಟು ಚಿತ್ರೀಕರಣ ಮುಗಿದಿತ್ತು. ಇನ್ನೂ ಸ್ವಲ್ಪ ಭಾಗದ ಚಿತ್ರೀಕರಣವಾಗಬೇಕು ಎನ್ನುವಷ್ಟರಲ್ಲಿ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ವಿನೋದ್‍ ದೋಂಡಾಳೆ ಅವರ ಸಾವಿನ ಸುದ್ದಿ ಬಂದಿದೆ. ಕಿರುತೆರೆಯಲ್ಲಿ ದೊಡ್ಡ ಹೆಸರಾಗಿದ್ದ ವಿನೋದ್‍, ಹಿರಿತೆರೆಗೆ ಬಂದು ತಪ್ಪು ಮಾಡಿದರು, ಚಿತ್ರಕ್ಕೆ ಹೆಚ್ಚು ಸಾಲ ಮಾಡಿಕೊಂಡು ಅದನ್ನು ತೀರಿಸುವುದಕ್ಕೆ ಸಾಧ್ಯವಾಗದೆ ಆತ್ಮಹತ್ಯೆಯ ಹಾದಿ ಹಿಡಿಯಬೇಕಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಇಷ್ಟಕ್ಕೂ ಯಾಕೆ ‘ಅಶೋಕ ಬ್ಲೇಡ್‍’ ಚಿತ್ರೀಕರಣ ವಿಳಂಬವಾಯಿತು ಮತ್ತು ಸಾಲ ಯಾಕೆ ಹೆಚ್ಚಿತ್ತು ಎಂಬ ಪ್ರಶ್ನೆ ಬರುವುದು ಸಹಜ. ಈ ಕುರಿತು ಮಾತನಾಡಿರುವ ಚಿತ್ರದ ಮತ್ತೊಬ್ಬ ನಿರ್ಮಾಪಕ ವರ್ಧನ್‍ ಹರಿ, ‘ಸಮಸ್ಯೆ ಇದ್ದಿದ್ದು ಹೌದು. ಚಿತ್ರ ಶುರುವಾಗಿ ಎರಡು ವರ್ಷವಾದರೂ ಇನ್ನೂ ಮುಗಿದಿಲ್ಲ, ಇನ್ನೂ ಚಿತ್ರೀಕರಣ ಬಾಕಿ ಇದೆ ಎಂಬ ಬೇಸರ ವಿನೋದ್‍ ಅವರಿಗೆ ಇತ್ತು. ಆದರೆ, ಅದಕ್ಕೆ ಪರಿಹಾರ ಹಿಂದಿನ ದಿನವಷ್ಟೇ ಸಿಕ್ಕಿತ್ತು. ಶುಕ್ರವಾರವಷ್ಟೇ ನಮಗೆ ಹೂಡಿಕೆದಾರರು ಸಿಕ್ಕಿದ್ದರು. ಚಿತ್ರದ ಶೋರೀಲ್‍ ನೋಡಿ, ಚಿತ್ರಕ್ಕೆ ಐದು ಕೋಟಿಯಷ್ಟು ಬಂಡವಾಳೆ ಹೂಡಿಕೆ ಮಾಡುವುದಕ್ಕೆ ರೆಡಿಯಾಗಿದ್ದರು. ಇದರಿಂದ ವಿನೋದ್‍ ಸಹ ಬಹಳ ಖುಷಿಯಾಗಿದ್ದರು. ಆದರೆ, ಶನಿವಾರ ಬೆಳಿಗ್ಗೆ ಅವರು ನಿಧನರಾದ ಸುದ್ದಿ ಬಂತು. ಸಮಸ್ಯೆಗೆ ಪರಿಹಾರ ಸಿಗಲಿಲ್ಲ ಎಂದರೆ ಏನಾದರೂ ಹೇಳಬಹುದಿತ್ತು. ಆದರೆ, ಪರಿಹಾರ ಸಿಕ್ಕಿದ ಮೇಲೆ ಯಾಕೆ ದುಡುಕಿದರೋ ಗೊತ್ತಿಲ್ಲ’ ಎನ್ನುತ್ತಾರೆ ವರ್ಧನ್‍.

ಚಿತ್ರದ ಪ್ಲಾನಿಂಗ್‍ನಲ್ಲಿ ಯಡವಟ್ಟಾಗಿದ್ದೇ ಎಲ್ಲದಕ್ಕೂ ಕಾರಣ ಎಂಬುದು ಅವರ ಅಭಿಪ್ರಾಯ. ‘ನಾವು 45 ದಿನಗಳಲ್ಲಿ ಚಿತ್ರೀಕರಣ ಮುಗಿಸಬೇಕೆಂದುಕೊಂಡಿದ್ದೆವು. ಆದರೆ, 87 ದಿನ ಆಯ್ತು. ಆರಂಭದಲ್ಲಿ ಒಂದೂವರೆ ಕೋಟಿಯಲ್ಲಿ ಮುಗಿಸಬೇಕು ಅಂತಂದುಕೊಂಡಿದ್ದು ಹೌದು. ಆದರೆ, ಚಿತ್ರ ಬೆಳೆಯುತ್ತಾ ಬೆಳೆಯುತ್ತಾ ಐದು ಕೋಟಿಯಷ್ಟಾಯಿತು. ನಾಲ್ಕು ದಿನಗಳ ಕ್ಲೈಮ್ಯಾಕ್ಸ್ ಚಿತ್ರೀಕರಣ 14 ದಿನಗಳಾಯ್ತು, ಕ್ಲೈಮ್ಯಾಕ್ಸ್ ಫೈಟಿಗೆ 45 ಲಕ್ಷ ಖರ್ಚಾಯಿತು. ಚೆನ್ನಾಗಿ ಮಾಡಬೇಕು ಅಂತ ಹೋಗಿದ್ದಿಕ್ಕೆ ಹೀಗಾಯ್ತು. ಚಿತ್ರದ ಬಗ್ಗೆ ವಿನೋದ್‍ಗೆ ತುಂಬಾ ವಿಶ್ವಾಸವಿತ್ತು. ಆದರೆ, ಯಾವಾಗ ಚಿತ್ರ ನಿಂತಿತೋ ಅವರು ಮಾನಸಿಕವಾಗಿ ಕುಗ್ಗಿದ್ದರು’ ಎನ್ನುತ್ತಾರೆ ವರ್ಧನ್‍.

‘ಅಶೋಕ ಬ್ಲೇಡ್‍’ ಚಿತ್ರಕ್ಕೆ ಮುಂದಿನ ತಿಂಗಳು ಬಾಕಿ ಇರುವ ಚಿತ್ರೀಕರಣ ನಡೆಯಲಿದೆಯಂತೆ. ವಿನೋದ್‍ ಹೆಸರಲ್ಲೇ ಚಿತ್ರವು ತೆರೆಗೆ ಬರಲಿದೆ. ‘ಈ ಚಿತ್ರದಿಂದ ನಿಮಗೆ ತುಂಬಾ ದೊಡ್ಡ ಹೆಸರು ಬರುತ್ತೆ ಎಂದು ಹೇಳುತ್ತಲೇ ಇದ್ದೆ. ಇದು ಅವರ ಕನಸು. ಹಾಗಾಗಿ, ಅವರ ಹೆಸರಲ್ಲೇ ಚಿತ್ರ ಬಿಡುಗಡೆಯಾಗುತ್ತದೆ. ಆದಷ್ಟು ಬೇಗ ಚಿತ್ರೀಕರಣ ಮುಗಿಸಿ ಚಿತ್ರ ಬಿಡುಗಡೆ ಮಾಡುತ್ತೇವೆ’ ಎನ್ನುತ್ತಾರೆ ವರ್ಧನ್‍.

ಭೂಮಿಕಾ

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

5 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

6 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago