ಮನರಂಜನೆ

ವಿನೋದ್‍ ದೋಂಡಾಳೆ ಸಾವಿನ ನಂತರ ‘ಅಶೋಕ ಬ್ಲೇಡ್‍’ ಕಥೆಯೇನು?

ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ಚಿತ್ರವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿ ಶೇ. 70ರಷ್ಟು ಚಿತ್ರೀಕರಣ ಮುಗಿದಿತ್ತು. ಇನ್ನೂ ಸ್ವಲ್ಪ ಭಾಗದ ಚಿತ್ರೀಕರಣವಾಗಬೇಕು ಎನ್ನುವಷ್ಟರಲ್ಲಿ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ವಿನೋದ್‍ ದೋಂಡಾಳೆ ಅವರ ಸಾವಿನ ಸುದ್ದಿ ಬಂದಿದೆ. ಕಿರುತೆರೆಯಲ್ಲಿ ದೊಡ್ಡ ಹೆಸರಾಗಿದ್ದ ವಿನೋದ್‍, ಹಿರಿತೆರೆಗೆ ಬಂದು ತಪ್ಪು ಮಾಡಿದರು, ಚಿತ್ರಕ್ಕೆ ಹೆಚ್ಚು ಸಾಲ ಮಾಡಿಕೊಂಡು ಅದನ್ನು ತೀರಿಸುವುದಕ್ಕೆ ಸಾಧ್ಯವಾಗದೆ ಆತ್ಮಹತ್ಯೆಯ ಹಾದಿ ಹಿಡಿಯಬೇಕಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಇಷ್ಟಕ್ಕೂ ಯಾಕೆ ‘ಅಶೋಕ ಬ್ಲೇಡ್‍’ ಚಿತ್ರೀಕರಣ ವಿಳಂಬವಾಯಿತು ಮತ್ತು ಸಾಲ ಯಾಕೆ ಹೆಚ್ಚಿತ್ತು ಎಂಬ ಪ್ರಶ್ನೆ ಬರುವುದು ಸಹಜ. ಈ ಕುರಿತು ಮಾತನಾಡಿರುವ ಚಿತ್ರದ ಮತ್ತೊಬ್ಬ ನಿರ್ಮಾಪಕ ವರ್ಧನ್‍ ಹರಿ, ‘ಸಮಸ್ಯೆ ಇದ್ದಿದ್ದು ಹೌದು. ಚಿತ್ರ ಶುರುವಾಗಿ ಎರಡು ವರ್ಷವಾದರೂ ಇನ್ನೂ ಮುಗಿದಿಲ್ಲ, ಇನ್ನೂ ಚಿತ್ರೀಕರಣ ಬಾಕಿ ಇದೆ ಎಂಬ ಬೇಸರ ವಿನೋದ್‍ ಅವರಿಗೆ ಇತ್ತು. ಆದರೆ, ಅದಕ್ಕೆ ಪರಿಹಾರ ಹಿಂದಿನ ದಿನವಷ್ಟೇ ಸಿಕ್ಕಿತ್ತು. ಶುಕ್ರವಾರವಷ್ಟೇ ನಮಗೆ ಹೂಡಿಕೆದಾರರು ಸಿಕ್ಕಿದ್ದರು. ಚಿತ್ರದ ಶೋರೀಲ್‍ ನೋಡಿ, ಚಿತ್ರಕ್ಕೆ ಐದು ಕೋಟಿಯಷ್ಟು ಬಂಡವಾಳೆ ಹೂಡಿಕೆ ಮಾಡುವುದಕ್ಕೆ ರೆಡಿಯಾಗಿದ್ದರು. ಇದರಿಂದ ವಿನೋದ್‍ ಸಹ ಬಹಳ ಖುಷಿಯಾಗಿದ್ದರು. ಆದರೆ, ಶನಿವಾರ ಬೆಳಿಗ್ಗೆ ಅವರು ನಿಧನರಾದ ಸುದ್ದಿ ಬಂತು. ಸಮಸ್ಯೆಗೆ ಪರಿಹಾರ ಸಿಗಲಿಲ್ಲ ಎಂದರೆ ಏನಾದರೂ ಹೇಳಬಹುದಿತ್ತು. ಆದರೆ, ಪರಿಹಾರ ಸಿಕ್ಕಿದ ಮೇಲೆ ಯಾಕೆ ದುಡುಕಿದರೋ ಗೊತ್ತಿಲ್ಲ’ ಎನ್ನುತ್ತಾರೆ ವರ್ಧನ್‍.

ಚಿತ್ರದ ಪ್ಲಾನಿಂಗ್‍ನಲ್ಲಿ ಯಡವಟ್ಟಾಗಿದ್ದೇ ಎಲ್ಲದಕ್ಕೂ ಕಾರಣ ಎಂಬುದು ಅವರ ಅಭಿಪ್ರಾಯ. ‘ನಾವು 45 ದಿನಗಳಲ್ಲಿ ಚಿತ್ರೀಕರಣ ಮುಗಿಸಬೇಕೆಂದುಕೊಂಡಿದ್ದೆವು. ಆದರೆ, 87 ದಿನ ಆಯ್ತು. ಆರಂಭದಲ್ಲಿ ಒಂದೂವರೆ ಕೋಟಿಯಲ್ಲಿ ಮುಗಿಸಬೇಕು ಅಂತಂದುಕೊಂಡಿದ್ದು ಹೌದು. ಆದರೆ, ಚಿತ್ರ ಬೆಳೆಯುತ್ತಾ ಬೆಳೆಯುತ್ತಾ ಐದು ಕೋಟಿಯಷ್ಟಾಯಿತು. ನಾಲ್ಕು ದಿನಗಳ ಕ್ಲೈಮ್ಯಾಕ್ಸ್ ಚಿತ್ರೀಕರಣ 14 ದಿನಗಳಾಯ್ತು, ಕ್ಲೈಮ್ಯಾಕ್ಸ್ ಫೈಟಿಗೆ 45 ಲಕ್ಷ ಖರ್ಚಾಯಿತು. ಚೆನ್ನಾಗಿ ಮಾಡಬೇಕು ಅಂತ ಹೋಗಿದ್ದಿಕ್ಕೆ ಹೀಗಾಯ್ತು. ಚಿತ್ರದ ಬಗ್ಗೆ ವಿನೋದ್‍ಗೆ ತುಂಬಾ ವಿಶ್ವಾಸವಿತ್ತು. ಆದರೆ, ಯಾವಾಗ ಚಿತ್ರ ನಿಂತಿತೋ ಅವರು ಮಾನಸಿಕವಾಗಿ ಕುಗ್ಗಿದ್ದರು’ ಎನ್ನುತ್ತಾರೆ ವರ್ಧನ್‍.

‘ಅಶೋಕ ಬ್ಲೇಡ್‍’ ಚಿತ್ರಕ್ಕೆ ಮುಂದಿನ ತಿಂಗಳು ಬಾಕಿ ಇರುವ ಚಿತ್ರೀಕರಣ ನಡೆಯಲಿದೆಯಂತೆ. ವಿನೋದ್‍ ಹೆಸರಲ್ಲೇ ಚಿತ್ರವು ತೆರೆಗೆ ಬರಲಿದೆ. ‘ಈ ಚಿತ್ರದಿಂದ ನಿಮಗೆ ತುಂಬಾ ದೊಡ್ಡ ಹೆಸರು ಬರುತ್ತೆ ಎಂದು ಹೇಳುತ್ತಲೇ ಇದ್ದೆ. ಇದು ಅವರ ಕನಸು. ಹಾಗಾಗಿ, ಅವರ ಹೆಸರಲ್ಲೇ ಚಿತ್ರ ಬಿಡುಗಡೆಯಾಗುತ್ತದೆ. ಆದಷ್ಟು ಬೇಗ ಚಿತ್ರೀಕರಣ ಮುಗಿಸಿ ಚಿತ್ರ ಬಿಡುಗಡೆ ಮಾಡುತ್ತೇವೆ’ ಎನ್ನುತ್ತಾರೆ ವರ್ಧನ್‍.

ಭೂಮಿಕಾ

Recent Posts

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

1 hour ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

1 hour ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

3 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

3 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

4 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

6 hours ago