ಮನರಂಜನೆ

ವಿನೋದ್‍ ದೋಂಡಾಳೆ ಸಾವಿನ ನಂತರ ‘ಅಶೋಕ ಬ್ಲೇಡ್‍’ ಕಥೆಯೇನು?

ಸತೀಶ್‍ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ಚಿತ್ರವು ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿ ಶೇ. 70ರಷ್ಟು ಚಿತ್ರೀಕರಣ ಮುಗಿದಿತ್ತು. ಇನ್ನೂ ಸ್ವಲ್ಪ ಭಾಗದ ಚಿತ್ರೀಕರಣವಾಗಬೇಕು ಎನ್ನುವಷ್ಟರಲ್ಲಿ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ವಿನೋದ್‍ ದೋಂಡಾಳೆ ಅವರ ಸಾವಿನ ಸುದ್ದಿ ಬಂದಿದೆ. ಕಿರುತೆರೆಯಲ್ಲಿ ದೊಡ್ಡ ಹೆಸರಾಗಿದ್ದ ವಿನೋದ್‍, ಹಿರಿತೆರೆಗೆ ಬಂದು ತಪ್ಪು ಮಾಡಿದರು, ಚಿತ್ರಕ್ಕೆ ಹೆಚ್ಚು ಸಾಲ ಮಾಡಿಕೊಂಡು ಅದನ್ನು ತೀರಿಸುವುದಕ್ಕೆ ಸಾಧ್ಯವಾಗದೆ ಆತ್ಮಹತ್ಯೆಯ ಹಾದಿ ಹಿಡಿಯಬೇಕಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಇಷ್ಟಕ್ಕೂ ಯಾಕೆ ‘ಅಶೋಕ ಬ್ಲೇಡ್‍’ ಚಿತ್ರೀಕರಣ ವಿಳಂಬವಾಯಿತು ಮತ್ತು ಸಾಲ ಯಾಕೆ ಹೆಚ್ಚಿತ್ತು ಎಂಬ ಪ್ರಶ್ನೆ ಬರುವುದು ಸಹಜ. ಈ ಕುರಿತು ಮಾತನಾಡಿರುವ ಚಿತ್ರದ ಮತ್ತೊಬ್ಬ ನಿರ್ಮಾಪಕ ವರ್ಧನ್‍ ಹರಿ, ‘ಸಮಸ್ಯೆ ಇದ್ದಿದ್ದು ಹೌದು. ಚಿತ್ರ ಶುರುವಾಗಿ ಎರಡು ವರ್ಷವಾದರೂ ಇನ್ನೂ ಮುಗಿದಿಲ್ಲ, ಇನ್ನೂ ಚಿತ್ರೀಕರಣ ಬಾಕಿ ಇದೆ ಎಂಬ ಬೇಸರ ವಿನೋದ್‍ ಅವರಿಗೆ ಇತ್ತು. ಆದರೆ, ಅದಕ್ಕೆ ಪರಿಹಾರ ಹಿಂದಿನ ದಿನವಷ್ಟೇ ಸಿಕ್ಕಿತ್ತು. ಶುಕ್ರವಾರವಷ್ಟೇ ನಮಗೆ ಹೂಡಿಕೆದಾರರು ಸಿಕ್ಕಿದ್ದರು. ಚಿತ್ರದ ಶೋರೀಲ್‍ ನೋಡಿ, ಚಿತ್ರಕ್ಕೆ ಐದು ಕೋಟಿಯಷ್ಟು ಬಂಡವಾಳೆ ಹೂಡಿಕೆ ಮಾಡುವುದಕ್ಕೆ ರೆಡಿಯಾಗಿದ್ದರು. ಇದರಿಂದ ವಿನೋದ್‍ ಸಹ ಬಹಳ ಖುಷಿಯಾಗಿದ್ದರು. ಆದರೆ, ಶನಿವಾರ ಬೆಳಿಗ್ಗೆ ಅವರು ನಿಧನರಾದ ಸುದ್ದಿ ಬಂತು. ಸಮಸ್ಯೆಗೆ ಪರಿಹಾರ ಸಿಗಲಿಲ್ಲ ಎಂದರೆ ಏನಾದರೂ ಹೇಳಬಹುದಿತ್ತು. ಆದರೆ, ಪರಿಹಾರ ಸಿಕ್ಕಿದ ಮೇಲೆ ಯಾಕೆ ದುಡುಕಿದರೋ ಗೊತ್ತಿಲ್ಲ’ ಎನ್ನುತ್ತಾರೆ ವರ್ಧನ್‍.

ಚಿತ್ರದ ಪ್ಲಾನಿಂಗ್‍ನಲ್ಲಿ ಯಡವಟ್ಟಾಗಿದ್ದೇ ಎಲ್ಲದಕ್ಕೂ ಕಾರಣ ಎಂಬುದು ಅವರ ಅಭಿಪ್ರಾಯ. ‘ನಾವು 45 ದಿನಗಳಲ್ಲಿ ಚಿತ್ರೀಕರಣ ಮುಗಿಸಬೇಕೆಂದುಕೊಂಡಿದ್ದೆವು. ಆದರೆ, 87 ದಿನ ಆಯ್ತು. ಆರಂಭದಲ್ಲಿ ಒಂದೂವರೆ ಕೋಟಿಯಲ್ಲಿ ಮುಗಿಸಬೇಕು ಅಂತಂದುಕೊಂಡಿದ್ದು ಹೌದು. ಆದರೆ, ಚಿತ್ರ ಬೆಳೆಯುತ್ತಾ ಬೆಳೆಯುತ್ತಾ ಐದು ಕೋಟಿಯಷ್ಟಾಯಿತು. ನಾಲ್ಕು ದಿನಗಳ ಕ್ಲೈಮ್ಯಾಕ್ಸ್ ಚಿತ್ರೀಕರಣ 14 ದಿನಗಳಾಯ್ತು, ಕ್ಲೈಮ್ಯಾಕ್ಸ್ ಫೈಟಿಗೆ 45 ಲಕ್ಷ ಖರ್ಚಾಯಿತು. ಚೆನ್ನಾಗಿ ಮಾಡಬೇಕು ಅಂತ ಹೋಗಿದ್ದಿಕ್ಕೆ ಹೀಗಾಯ್ತು. ಚಿತ್ರದ ಬಗ್ಗೆ ವಿನೋದ್‍ಗೆ ತುಂಬಾ ವಿಶ್ವಾಸವಿತ್ತು. ಆದರೆ, ಯಾವಾಗ ಚಿತ್ರ ನಿಂತಿತೋ ಅವರು ಮಾನಸಿಕವಾಗಿ ಕುಗ್ಗಿದ್ದರು’ ಎನ್ನುತ್ತಾರೆ ವರ್ಧನ್‍.

‘ಅಶೋಕ ಬ್ಲೇಡ್‍’ ಚಿತ್ರಕ್ಕೆ ಮುಂದಿನ ತಿಂಗಳು ಬಾಕಿ ಇರುವ ಚಿತ್ರೀಕರಣ ನಡೆಯಲಿದೆಯಂತೆ. ವಿನೋದ್‍ ಹೆಸರಲ್ಲೇ ಚಿತ್ರವು ತೆರೆಗೆ ಬರಲಿದೆ. ‘ಈ ಚಿತ್ರದಿಂದ ನಿಮಗೆ ತುಂಬಾ ದೊಡ್ಡ ಹೆಸರು ಬರುತ್ತೆ ಎಂದು ಹೇಳುತ್ತಲೇ ಇದ್ದೆ. ಇದು ಅವರ ಕನಸು. ಹಾಗಾಗಿ, ಅವರ ಹೆಸರಲ್ಲೇ ಚಿತ್ರ ಬಿಡುಗಡೆಯಾಗುತ್ತದೆ. ಆದಷ್ಟು ಬೇಗ ಚಿತ್ರೀಕರಣ ಮುಗಿಸಿ ಚಿತ್ರ ಬಿಡುಗಡೆ ಮಾಡುತ್ತೇವೆ’ ಎನ್ನುತ್ತಾರೆ ವರ್ಧನ್‍.

ಭೂಮಿಕಾ

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

59 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago